Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲ್ಯರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:15
22 ತಿಳಿವುಗಳ ಹೋಲಿಕೆ  

ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್.


ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II


ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು.


ಸೌಲನೂ ಬೆನ್ಯಾಮೀನ್ ಗೋತ್ರಕ್ಕೆ ಸೇರಿದವನೇ. ದಾವೀದನನ್ನು ಹಿಂಬಾಲಿಸಿದವರು ಎಡಗೈಯಿಂದಾಗಲೀ ಬಲಗೈಯಿಂದಾಗಲೀ ಬಾಣಗಳನ್ನೆಸೆಯುವವರೂ ಕವಣೆಗಳಲ್ಲಿ ಕಲ್ಲುಗಳನ್ನಿಟ್ಟು ಎಸೆಯಲು ಶಕ್ತರೂ ಆಗಿದ್ದರು.


ಈ ಎಲ್ಲ ಜನರಲ್ಲಿ ಏಳುನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನು ಕೂದಲ ಎಳೆಯಷ್ಟೂ ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣನು;


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಗುಟ್ಟಾಗಿ ಬಹುಮಾನ ಕೊಟ್ಟು ಸಿಟ್ಟನ್ನು ಅಡಗಿಸುತ್ತಾರೆ; ಮಡಿಲಲ್ಲಿ ಲಂಚವನ್ನು ಮುಚ್ಚಿಟ್ಟು ಕೋಪವನ್ನು ಆರಿಸುತ್ತಾರೆ.


ಉದಾರಿಯ ಕೃಪೆಕೋರುವವರು ಅನೇಕರು; ದಾನಶೂರನಿಗೆ ಎಲ್ಲರು ಸ್ನೇಹಿತರು.


ಕಾಣಿಕೆ ತರುವವನಿಗೆ ಬಾಗಿಲು ತೆರೆಯುತ್ತದೆ; ಶ್ರೀಮಂತನ ಸಾನ್ನಿಧ್ಯಕ್ಕೂ ಅದು ನಡೆಸುತ್ತದೆ.


ಸುಖಪಡಿಸೆಮ್ಮನು ನೀ ಕಷ್ಟಪಡಿಸಿದಷ್ಟು ಕಾಲ I ಕೆಡುಕನ್ನು ನಾವು ಅನುಭವಿಸಿದಷ್ಟು ವರ್ಷಕಾಲ II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಹದಿನೆಂಟು ವರ್ಷಕಾಲ ಇಸ್ರಯೇಲರು ಅವನಿಗೆ ಗುಲಾಮರಾಗಿದ್ದರು.


ಅವನು ತನಗಾಗಿ ಒಂದುವರೆ ಅಡಿ ಉದ್ದವಾದ ಇಬ್ಬಾಯಿ ಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ, ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋದನು.


ಆಗ ಸರ್ವೇಶ್ವರ ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದರು.


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಅವನು ಅಮಾಸನನ್ನು, “ಸಹೋದರಾ, ಕ್ಷೇಮವೇ?” ಎಂದು ಕೇಳಿ ಮುದ್ದಿಡುವುದಕ್ಕೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯನ್ನು ಇರಿದನು.


ಅವನ ಕರುಳೆಲ್ಲಾ ಹೊರಗೆ ಬಂದುವು. ಎರಡನೆಯ ಸಾರಿ ಇರಿಯಬೇಕಾಗಿರಲಿಲ್ಲ; ಅಷ್ಟಕ್ಕೆ ಅವನು ಸತ್ತನು.


ಬೆಳನ ಮಕ್ಕಳು - ಅದ್ದಾರ್, ಗೇರ, ಅಬೀಹೂದ್,


ಗೇರ, ಶೆಪೂಫಾನ್, ಹೂರಾಮ್ ಎಂಬವರು.


ಅವರೆಲ್ಲರು ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು