Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:31 - ಕನ್ನಡ ಸತ್ಯವೇದವು C.L. Bible (BSI)

31 ಏಹೂದನ ಬಳಿಕ ಅನಾತನ ಮಗ ಶಮ್ಗರನು ಮುಂದೆಬಂದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಯೇಲರನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಹತಮಾಡಿ ಇಸ್ರಾಯೇಲ್ಯರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ ಮಗನಾದ ಶಮ್ಗರ. ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಏಹೂದನ ತರುವಾಯ ಅನಾತನ ಮಗ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರುನೂರು ಜನರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:31
17 ತಿಳಿವುಗಳ ಹೋಲಿಕೆ  

ಅನಾತನ ಮಗ ಶಮ್ಗರನ ಕಾಲದಲ್ಲಿ, ಯಾಯೇಲನ ದಿನಗಳಲಿ ನಿಂತುಹೋಯಿತು ಸಂಚಾರ ರಾಜಮಾರ್ಗಗಳಲಿ, ನಡೆದರು ಪಯಣಿಗರು ಸೀಳುದಾರಿಗಳಲಿ.


ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.


ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು.


ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು.


ಅಲ್ಲೇ ಒಂದು ಕತ್ತೆಯ ದವಡೆ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು,


ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.


ಆಗ ಸರ್ವೇಶ್ವರ ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದರು.


ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.


ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಂಡರು. ಇಸ್ರಯೇಲರು ಕೂಡಿ ಮಿಚ್ಫೆಯಲ್ಲಿ ಪಾಳೆಯಮಾಡಿಕೊಂಡರು.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿದರು.


ಏಹೂದನು ನಿಧನನಾದ ನಂತರ ಇಸ್ರಯೇಲರು ಪುನಃ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು.


ಅವರು ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಆಗ ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್ ರಾಜನಿಗೂ ಮಾರಿಬಿಡಲಾಯಿತು. ಇವರು ದಂಡೆತ್ತಿ ಬಂದು ಅವರೊಡನೆ ಯುದ್ಧಮಾಡಿದರು.


ಸರ್ವೇಶ್ವರ ಅವರಿಗೆ, “ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು