Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ದೆಬೋರಳು ಬಾರಾಕನಿಗೆ - ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇದೇ; ನಿಶ್ಚಯವಾಗಿ ಆತನು ತಾನೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವನು ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದಿಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ದೆಬೋರಳು ಬಾರಾಕನಿಗೆ, “ಈ ದಿನ ಯೆಹೋವನು ಸೀಸೆರನನ್ನು ಸೋಲಿಸಲು ನಿನಗೆ ಸಹಾಯ ಮಾಡುತ್ತಾನೆ. ಯೆಹೋವನು ನಿನಗಾಗಿ ದಾರಿಯನ್ನು ಸುಗಮಗೊಳಿಸಿದ್ದಾನೆಂಬುದು ನಿನಗೆ ಖಚಿತವಾಗಿ ಗೊತ್ತಿದೆ” ಎಂದು ಹೇಳಿದಳು. ಆದ್ದರಿಂದ ಬಾರಾಕನು ಹತ್ತು ಸಾವಿರ ಜನರೊಂದಿಗೆ ತಾಬೋರ್ ಬೆಟ್ಟದಿಂದ ಇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ದೆಬೋರಳು ಬಾರಾಕನಿಗೆ, “ನೀನು ಏಳು. ಏಕೆಂದರೆ ಯೆಹೋವ ದೇವರು ಸೀಸೆರನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವ ದಿನವು ಇದೇ. ಯೆಹೋವ ದೇವರು ನಿನ್ನ ಮುಂದೆ ಹೊರಡಲಿಲ್ಲವೋ?” ಎಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು, ತಾಬೋರ್ ಬೆಟ್ಟದಿಂದ ಇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:14
13 ತಿಳಿವುಗಳ ಹೋಲಿಕೆ  

ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಸಾಗಕಳಿಸುತ್ತೇನೆ,” ಎಂದು ಎಬ್ಬಿಸಲು, ಅವನೆದ್ದನು. ತರುವಾಯ ಅವರು ಇಬ್ಬರೂ ಹೊರಟು ಊರಹೊರಗೆ ಬಂದಾಗ ಸಮುವೇಲನು ಸೌಲನಿಗೆ,


ಅವನು, “ಏಳು, ಹೋಗೋಣ,” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಬರಲಿಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.


ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.


ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ?


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.


ಅದೇ ರಾತ್ರಿ ಸರ್ವೇಶ್ವರ ಗಿದ್ಯೋನ್ಯನಿಗೆ, “ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು