Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:11 - ಕನ್ನಡ ಸತ್ಯವೇದವು C.L. Bible (BSI)

11 ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೇದುವ ಬಾವಿಗಳ ಬಳಿಯಲ್ಲಿ ಕೊಳ್ಳೆಯನ್ನು ಹಂಚಿಕೊಳ್ಳುವವರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯನ್ನು ವರ್ಣಿಸುತ್ತಾರೆ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರು ಬಾಗಲುಗಳಿಗೆ ಇಳಿದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀರು ಸೇದುವ ಸ್ಥಳಗಳ ಹತ್ತಿರ ಗಾಯಕರ ಶಬ್ದದಿಂದ ಯೆಹೋವ ದೇವರ ನೀತಿಸಾಧನೆಗಳನ್ನು ವರ್ಣಿಸುತ್ತಾರೆ. ಇಸ್ರಾಯೇಲಿನಲ್ಲಿ ಅವರ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ಮಹತ್ಕಾರ್ಯಗಳನ್ನು ತಿರುಗಿ ಪ್ರಕಟಿಸುವರು. “ಆಗ ಯೆಹೋವ ದೇವರ ಜನರು ಪಟ್ಟಣದ ಬಾಗಿಲುಗಳಿಗೆ ಇಳಿದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:11
19 ತಿಳಿವುಗಳ ಹೋಲಿಕೆ  

ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”


ಸರ್ವೇಶ್ವರ ನಿಮ್ಮ ಹಾಗು ನಿಮ್ಮ ಪೂರ್ವಜರ ಪರವಾಗಿ ನಡೆಸಿದ ನೀತಿಕಾರ್ಯಗಳನ್ನು ಕುರಿತು ಅವರೆದುರಿನಲ್ಲೇ ನಿಮಗೆ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.


ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.


ಪ್ರಾಣಾಪಾಯದಿಂದ, ಕಾಡಿನ ಕಟುಕರ ಭಯದಿಂದ ನಾವು ಪಡೆಯುತ್ತಿದ್ದೇವೆ ದವಸ ಧಾನ್ಯ.


ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತಿದ್ದೇವೆ ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತಿದ್ದೇವೆ.


“ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ;


ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ನಾನು ಊರ ಮುಂದಿನ ಚಾವಡಿಗೆ ಹೋದಾಗ ಚೌಕದ ಪೀಠದಲ್ಲಿ ಕುಳಿತುಕೊಂಡಾಗ,


ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ಪ್ರಕಟಿಸುವರವರು ನಿನ್ನ ಮಹೋಪಕಾರವನು I ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು II


ಸಂಜೆ, ಹೆಣ್ಣುಮಕ್ಕಳು ನೀರು ಹೊರುವುದಕ್ಕೆ ಬರುವ ವೇಳೆಗೆ, ಅವನು ಊರ ಹೊರಗಡೆ ಬಾವಿಯ ಬಳಿ ಒಂಟೆಗಳನ್ನು ಮಲಗಿಸಿದನು.


ಕೂಡಲೆ ಅವನಿಗೆ ಆ ಅಡವಿಯಲ್ಲಿ ಬಾವಿಯೊಂದು ಕಾಣಿಸಿತು. ಅದರ ಬಳಿ ಮೂರು ಕುರಿಹಿಂಡು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವುದಕ್ಕಾಗಿ ಆ ಬಾವಿಗೆ ಹೊಡೆದುಕೊಂಡು ಬರುವುದು ವಾಡಿಕೆ. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು.


ಹಿಂಡುಗಳೆಲ್ಲ ಅಲ್ಲಿ ಕೂಡಿದ್ದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ಮತ್ತೆ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.


ತನಗೆಂದು ತೆಗೆದುಕೊಂಡನು ನಾಡಿನ ಮೊದಲಭಾಗವನು ದೊರಕಿತಲ್ಲಿ ಅವನಿಗೆ ಮುಖ್ಯಸ್ಥನಿಗಾಗುವ ಸ್ವಾಸ್ತ್ಯವು. ಜನಾಧಿಪತಿಗಳ ಜೊತೆಬಂದು ನೆರವೇರಿಸಿದನು ಸರ್ವೇಶ್ವರನ ಆಣತಿಯನು; ಇಸ್ರಯೇಲನೊಡನೆ ಸ್ಥಾಪಿಸಿದನು ಸರ್ವೇಶ್ವರನ ನ್ಯಾಯನೀತಿಯನು.”


ಇಸ್ರಯೇಲರ ಹೆಣ್ಣು ಮಕ್ಕಳು ಪ್ರತಿ ವರ್ಷ ನಾಲ್ಕುದಿವಸ ಗಿಲ್ಯಾದನಾದ ಯೆಪ್ತಾಹನ ಮಗಳ ಸ್ಮರಣೆಮಾಡುತ್ತಾರೆ. ಅವರಲ್ಲಿ ಇದೊಂದು ಪದ್ಧತಿ.


ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು