Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:12 - ಕನ್ನಡ ಸತ್ಯವೇದವು C.L. Bible (BSI)

12 ಎಚ್ಚರಗೊಳ್ಳು, ಎಚ್ಚರಗೊಳ್ಳು, ದೆಬೋರಾ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಮಾಡು ನೀ ಗುಣಗಾನ, ಬಾರಾಕನೇ, ಏಳು; ಅಬೀನೋವಮನ ಮಗನೇ, ಏಳು, ಸೆರೆಹಿಡಿದವರನು ನೀ ಸಾಗಿಸಿಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಚ್ಚರವಾಗು, ದೆಬೋರಳೇ, ಎಚ್ಚರವಾಗು; ಎಚ್ಚರವಾಗು, ಎಚ್ಚರವಾಗಿ ಗಾನ ಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಏಳು, ಏಳು ದೆಬೋರಳೇ! ಏಳು, ಎದ್ದೇಳು, ಒಂದು ಗೀತೆಯನ್ನು ಹಾಡು! ಬಾರಾಕನೇ, ಏಳು! ಅಬೀನೋವಮನ ಮಗನೇ, ಹೋಗು; ನಿನ್ನ ಶತ್ರುಗಳನ್ನು ಸೆರೆ ಹಿಡಿದುಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ‘ಎಚ್ಚರವಾಗು, ಎಚ್ಚರವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗಿ ಹಾಡನ್ನು ಹಾಡು; ಬಾರಾಕನೇ, ಏಳು; ಅಬೀನೋವಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡೆಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:12
18 ತಿಳಿವುಗಳ ಹೋಲಿಕೆ  

ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಚೇತನಗೊಳ್ಳು ಮನವೇ, ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ಎಬ್ಬಿಸಿ ರವಿಯನು ಪ್ರಾತಃಕಾಲದೊಳು II


ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


‘ಆಗ ನಾನು ನೋಡಿದೆ ಎಚ್ಚೆತ್ತು ನನ್ನ ಕನಸು ನನಗೆ ಮನೋಹರವಾಗಿತ್ತು.’


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.


ಚೇತನಗೊಳ್ಳು, ಮನವೇ ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ನಾನೆಬ್ಬಿಸುವೆನು ಬೆಳಗಿನ ಜಾವವನು II


ಚದರಿಹೋದವರು ಕೂಡಿಬಂದರು ನಾಯಕರ ಬಳಿಗೆ ಸರ್ವೇಶ್ವರನ ಶೂರಜನರು ವೀರರಂತೆ ನೆರೆದುಬಂದರು ನನ್ನ ಸಹಾಯಕ್ಕೆ.


ನಿನ್ನ ಸ್ತುತಿಸುವೆನು ಪ್ರಭು ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು