Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:30 - ಕನ್ನಡ ಸತ್ಯವೇದವು C.L. Bible (BSI)

30 ‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?. ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿಶ್ಚಯವಾಗಿ ಅವರಿಗೆ ಕೊಳ್ಳೆಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ಸೈನಿಕನಿಗೆ ಒಬ್ಬಿಬ್ಬರು ದಾಸಿಯರೂ ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ವಸ್ತ್ರಗಳೂ ಕಂಠಮಾಲೆಯೂ ದೊರಕಿರುತ್ತವೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ‘ಅವರು ಓಡಲಿಲ್ಲವೋ? ಕೊಳ್ಳೆ ಹಂಚಿಕೊಳ್ಳಲಿಲ್ಲವೋ? ಒಬ್ಬೊಬ್ಬ ಸೈನಿಕನಿಗೆ ಒಂದೆರಡು ದಾಸಿಯರು ಸೀಸೆರನಿಗಾದರೋ ನಾನಾ ವರ್ಣವುಳ್ಳ ಬಟ್ಟೆಗಳು. ನಾನಾ ವರ್ಣವುಳ್ಳ ವಿಚಿತ್ರವಾಗಿ ಕಸೂತಿಹಾಕಿದ ಬಟ್ಟೆಗಳು, ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ಬಟ್ಟೆಗಳೂ ಕೊಳ್ಳೆ ಹಿಡಿಯುವವರಿಗೆ ತಕ್ಕಂಥ ಕಂಠಮಾಲೆಗಳೂ ಸಿಕ್ಕಲಿಲ್ಲವೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:30
11 ತಿಳಿವುಗಳ ಹೋಲಿಕೆ  

ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಭೂಷಿತಳಾಗಿಹಳಾಕೆ ಕಸೂತಿಕೆಲಸದ ವಸ್ತ್ರಗಳಿಂದ I ಬರುತಿಹಳು ರಾಜನ ಬಳಿಗೆ ಸಖಿಯರ ಪರಿವಾರ ಸಮೇತ II


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


(ಆಕೆ ನಾನಾ ವರ್ಣಗಳುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಅದೇ ತರದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು.) ಸೇವಕನು ಆಕೆಯನ್ನು ಹೊರಗೆ ಕಳುಹಿಸಿ ಕದಮುಚ್ಚಿದನು.


ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ.


ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ಸಭ್ಯಸ್ತ್ರೀಯರೊಳು ಬುದ್ಧಿವಂತೆಯರು ಕೊಟ್ಟ ಉತ್ತರವನು ತನ್ನೊಳಗೇ ಮೆಲಕು ಹಾಕಿದ್ದಳು ಇಂತೆಂದುಕೊಂಡು:


ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II


ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು.


ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆ ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳು ಇರಬೇಕು.


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು