Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:6 - ಕನ್ನಡ ಸತ್ಯವೇದವು C.L. Bible (BSI)

6 ಅನಾತನ ಮಗ ಶಮ್ಗರನ ಕಾಲದಲ್ಲಿ, ಯಾಯೇಲನ ದಿನಗಳಲಿ ನಿಂತುಹೋಯಿತು ಸಂಚಾರ ರಾಜಮಾರ್ಗಗಳಲಿ, ನಡೆದರು ಪಯಣಿಗರು ಸೀಳುದಾರಿಗಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತು ಹೋಯಿತು; ಪ್ರಯಾಣಿಕರು ಸೀಳುದಾರಿಹಿಡಿದು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ಮುಖ್ಯಮಾರ್ಗಗಳು ಬರಿದಾಗಿದ್ದವು. ವ್ಯಾಪಾರಿಗಳು ಮತ್ತು ಪ್ರಯಾಣಿಕರು ಸೀಳುದಾರಿಯಿಂದ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಅನಾತನ ಮಗ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿವಸಗಳಲ್ಲಿಯೂ ಹೆದ್ದಾರಿಯ ಸಂಚಾರ ನಿಂತುಹೋಯಿತು. ಪ್ರಯಾಣಿಕರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:6
11 ತಿಳಿವುಗಳ ಹೋಲಿಕೆ  

ರಾಜಮಾರ್ಗಗಳು ಬರಿದಾಗಿವೆ. ದಾರಿಗರೇ ಇಲ್ಲ.. ಶತ್ರುಗಳು ಒಪ್ಪಂದವನ್ನು ಮುರಿದಿದ್ದಾರೆ. ಸಾಕ್ಷಿಗಳನ್ನು ತಿರಸ್ಕರಿಸಿದ್ದಾರೆ. ಮಾನವರನ್ನು ಗಣನೆಗೆ ತಂದುಕೊಳ್ಳದವರಾಗಿದ್ದಾರೆ.


ಏಹೂದನ ಬಳಿಕ ಅನಾತನ ಮಗ ಶಮ್ಗರನು ಮುಂದೆಬಂದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಯೇಲರನ್ನು ಕಾಪಾಡಿದನು.


ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.


ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವುದಕ್ಕೆ ಆಗುತ್ತಾ ಇರಲಿಲ್ಲ. ನಾಡಿನ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ದೆಬೋರಾ, ಇಸ್ರಯೇಲರ ತಾಯಿಯಂತೆ ನೀ ಬರುವ ಮುನ್ನ ಪಾಳುಬಿದ್ದಿದ್ದವು ಇಸ್ರಯೇಲ ಗ್ರಾಮಗಳೆಲ್ಲ.


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು