Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:11 - ಕನ್ನಡ ಸತ್ಯವೇದವು C.L. Bible (BSI)

11 ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾವೃಕ್ಷದ ಅಡಿಯಲ್ಲಿ ಕೂತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ವಿುದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:11
17 ತಿಳಿವುಗಳ ಹೋಲಿಕೆ  

ಜೋಸೆಫನ ಮಗ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶಮೀದಾ, ಎಂಬವರ ವಂಶದವರಿಗೆ ಜೋರ್ಡನಿನ ಈಚೆಕಡೆ ಪಾಲು ಸಿಕ್ಕಿತು.


ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸರಿಸಮಾನ ಆದದ್ದನ್ನು ನಾನೇನು ಮಾಡಿದೆ? ಅಭೀಯಿಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಯಿಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.


‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.


ಒಫ್ರಾ, ಅಮ್ಮೋನ್ಯ, ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;


ಗಿಲ್ಯಾದನ ವಂಶದವರು ಇವರು : ಈಯೆಜೆರನಿಂದ ಈಯೆಜೆರ್ಯರು, ಹೇಲಿಕನಿಂದ ಹೇಲಿಕ್ಯರು,


ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.


ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನು ಅವಿತುಕೊಂಡು ತನ್ನ ಜೀವವನ್ನು ಉಳಿಸಿಕೊಂಡನು.


ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು