Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ - ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:12
16 ತಿಳಿವುಗಳ ಹೋಲಿಕೆ  

ದೇವದೂತನು ಆಕೆಯ ಬಳಿಗೆ ಬಂದು, “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಆಗ ಧೂಪಪೀಠದ ಬಲಗಡೆ ಅವನಿಗೆ ದೇವದೂತನೊಬ್ಬನು ಪ್ರತ್ಯಕ್ಷನಾದನು.


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.


ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,


ಈ ಗುರುತುಗಳೆಲ್ಲ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ವರ್ತಿಸು, ದೇವರು ನಿನ್ನೊಂದಿಗೆ ಇದ್ದಾರೆ!


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಗಿಲ್ಯಾದ್ಯನಾದ ಯೆಪ್ತಾಹನು ಒಬ್ಬ ಮಹಾಪರಾಕ್ರಮಿ. ಈತ ಗಿಲ್ಯಾದನಿಗೆ ಒಬ್ಬ ಉಪಪತ್ನಿಯಲ್ಲಿ ಹುಟ್ಟಿದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು