Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಅವನನ್ನು ದಿಟ್ಟಿಸಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅವನನ್ನು ಚೆನ್ನಾಗಿ ನೋಡಿ - ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಾಯೇಲ್ಯರನ್ನು ವಿುದ್ಯಾನ್ಯರಿಂದ ಬಿಡಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಗಿದ್ಯೋನನ ಕಡೆಗೆ ತಿರುಗಿ, “ನಿನ್ನ ಬಲವನ್ನು ಉಪಯೋಗಿಸು. ಹೋಗು, ಮಿದ್ಯಾನ್ಯರಿಂದ ಇಸ್ರೇಲರನ್ನು ರಕ್ಷಿಸು. ನಾನು ಅವರನ್ನು ರಕ್ಷಿಸುವುದಕ್ಕಾಗಿ ನಿನ್ನನ್ನು ಕಳುಹಿಸುತ್ತಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಅವನನ್ನು ದೃಷ್ಟಿಸಿ ನೋಡಿ, “ನಿನಗಿರುವ ಈ ಶಕ್ತಿಯಲ್ಲಿ ಹೋಗು, ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸುವೆ; ನಾನು ನಿನ್ನನ್ನು ಕಳುಹಿಸಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:14
10 ತಿಳಿವುಗಳ ಹೋಲಿಕೆ  

ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.


ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಗಿದ್ಯೋನನು ದೇವರಿಗೆ, “ನೀವು ಹೇಳಿದಂತೆ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೋ ಇಲ್ಲವೋ ಎಂಬುದನ್ನು ತಿಳಿಯಪಡಿಸಿರಿ.


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು