Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಗಿದ್ಯೋನನು, “ಸ್ವಾಮೀ, ನಾನು ಇಸ್ರಯೇಲರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆ ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಗಿದ್ಯೋನನು ಆತನಿಗೆ - ಸ್ವಾಮೀ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಗಿದ್ಯೋನನು, “ಸ್ವಾಮೀ, ಮನಸ್ಸೆ ಕುಲದಲ್ಲಿ ನನ್ನ ಕುಟುಂಬವು ಕೇವಲ ಅಲ್ಪವಾದದ್ದು. ನನ್ನ ಕುಟುಂಬದಲ್ಲಿ ನಾನು ಎಲ್ಲರಿಗಿಂತ ಚಿಕ್ಕವನು. ನಾನು ಇಸ್ರೇಲರನ್ನು ರಕ್ಷಿಸಲು ಹೇಗೆ ಸಾಧ್ಯ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕವನು ಅವರಿಗೆ, “ನನ್ನ ಒಡೆಯನೇ, ಕ್ಷಮಿಸಿರಿ ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು. ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:15
13 ತಿಳಿವುಗಳ ಹೋಲಿಕೆ  

ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು.


ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.


ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.


ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.


ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.


ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು