Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ದೇವದೂತನು ಅವನಿಗೆ, “ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ” ಎನ್ನಲು ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ದೇವದೂತನು ಅವನಿಗೆ - ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅನ್ನಲು ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವದೂತನು ಗಿದ್ಯೋನನಿಗೆ, “ಆ ಮಾಂಸವನ್ನೂ ಹುಳಿಯಿಲ್ಲದ ಆ ರೊಟ್ಟಿಯನ್ನೂ ಆ ಕಲ್ಲಿನ ಮೇಲೆ ಇಡು. ಆಮೇಲೆ ಆ ನೀರನ್ನು ಅದರ ಮೇಲೆ ಸುರಿ” ಎಂದನು. ದೇವದೂತನು ಹೇಳಿದಂತೆಯೇ ಗಿದ್ಯೋನನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವದೂತನು ಅವನಿಗೆ, “ನೀನು ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲೆ ಇಟ್ಟು, ರಸವನ್ನು ಸುರಿ,” ಎಂದನು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:20
7 ತಿಳಿವುಗಳ ಹೋಲಿಕೆ  

ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಸರ್ವೇಶ್ವರನಿಗೆ ಸಮರ್ಪಿಸಿದನು. ಮಾನೋಹನು ಮತ್ತು ಅವನ ಹೆಂಡತಿ ನೋಡುತ್ತಿರುವಾಗಲೇ ಸರ್ವೇಶ್ವರನ ದೂತನು ಒಂದು ಆಶ್ಚರ್ಯಕಾರ್ಯ ಮಾಡಿದನು.


ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಹತ್ತು ಕಿಲೋಗ್ರಾಂ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಓಕ್ ಮರದ ಕೆಳಗೆ ಅವರ ಮುಂದೆ ತಂದಿಟ್ಟನು.


ಅನಂತರ ಸರ್ವೇಶ್ವರನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು.


“ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಬಲಿದಾನ ಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಸರ್ವೇಶ್ವರನಿಗೆ ಸಮರ್ಪಿಸು,” ಎಂದನು. ಅವನು ಸರ್ವೇಶ್ವರನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.


“ಸ್ವಾಮೀ, ದಯವಿರಲಿ, ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿ.


ಮತ್ತೆ ಮಾನೋಹನು ಸರ್ವೇಶ್ವರನ ದೂತನನ್ನು, “ನಾವು ನಿಮಗಾಗಿ ಒಂದು ಹೋತಮರಿಯನ್ನು ಅಡಿಗೆ ಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು ಎಂದು ಬೇಡಿಕೊಂಡನು. ಅವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು