Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:22 - ಕನ್ನಡ ಸತ್ಯವೇದವು C.L. Bible (BSI)

22 ಆತನು ಸರ್ವೇಶ್ವರನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಸ್ವಾಮಿ, ಸರ್ವೇಶ್ವರಾ, ಸರ್ವೇಶ್ವರನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು - ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತಾನು ಈವರೆಗೆ ಮಾತಾಡುತ್ತಿದ್ದದ್ದು ಯೆಹೋವನ ದೂತನೊಡನೆ ಎಂಬುದು ಗಿದ್ಯೋನನಿಗೆ ಆಗ ಅರಿವಾಯಿತು. ಗಿದ್ಯೋನನು, “ಸರ್ವಶಕ್ತನಾದ ಯೆಹೋವನೇ, ನಿನ್ನ ದೂತನನ್ನು ಮುಖಾಮುಖಿಯಾಗಿ ಕಂಡೆನು” ಎಂದು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನು ಯೆಹೋವ ದೇವರ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋನನು, “ಸಾರ್ವಭೌಮ ಯೆಹೋವ ದೇವರೇ, ನಾನು ಯೆಹೋವ ದೇವರ ದೂತನನ್ನು ಮುಖಾಮುಖಿಯಾಗಿ ಕಂಡೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:22
12 ತಿಳಿವುಗಳ ಹೋಲಿಕೆ  

ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು.


ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ?


ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು.


ನೀವು ಆ ಅಗ್ನಿಜ್ವಾಲೆಯನ್ನು ನೋಡಿ ಭಯಪಟ್ಟಿರಿ; ಬೆಟ್ಟವನ್ನು ಹತ್ತದೆ ಹೋದಿರಿ! ಆಗ ನಾನು ಸರ್ವೇಶ್ವರನಿಗೂ ನಿಮಗೂ ನಡುವೆ ನಿಂತು ಅವರು ನುಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಅವರು ನುಡಿದದ್ದು ಇದು:


ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.


ಆದರೆ ಸರ್ವೇಶ್ವರನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ,” ಎಂದನು.


ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯ ಆಯಿತು; ಕೀಲು ಕಳಚಿದ ತೊಡೆಯ ನಿಮಿತ್ತ ಅವನು ಕುಂಟುಕೊಂಡೇ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು