Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:26 - ಕನ್ನಡ ಸತ್ಯವೇದವು C.L. Bible (BSI)

26 ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಈ ಗುಡ್ಡದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಿಂದ ಒಂದು ಯಜ್ಞವೇದಿಯನ್ನು ಕಟ್ಟಿಸಿ ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ನಿಮ್ಮ ದೇವರಾದ ಯೆಹೋವನಿಗಾಗಿ ಸರಿಯಾದ ಯಜ್ಞವೇದಿಕೆಯನ್ನು ಈ ಗುಡ್ಡದ ಶಿಖರದಲ್ಲಿ ಕಟ್ಟಿಸು. ಆಮೇಲೆ ಆ ಎರಡನೆಯ ಹೋರಿಯನ್ನು ಈ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸು; ಅಶೇರಸ್ತಂಭದ ಕಟ್ಟಿಗೆಯನ್ನು ಈ ಸರ್ವಾಂಗಹೋಮಕ್ಕೆ ಉಪಯೋಗಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಆ ಎರಡನೆಯ ಹೋರಿಯನ್ನು ತಂದು, ನೀನು ಕಡಿದುಹಾಕಿದ ಅಶೇರ ಸ್ತಂಭವನ್ನು ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:26
8 ತಿಳಿವುಗಳ ಹೋಲಿಕೆ  

ಆದರೆ ಎಲ್ಲವನ್ನು ಒಪ್ಪವಾಗಿ, ಓರಣವಾಗಿ ಮಾಡಿರಿ.


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು, “ನೀವು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸಿ,” ಎಂದು ಹೇಳಿದನು.


ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ.


ಅದೇ ದಿನ ರಾತ್ರಿ ಸರ್ವೇಶ್ವರ ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆ ಕಟ್ಟಿರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು.


ಅಂತೆಯೇ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಸರ್ವೇಶ್ವರನು ಹೇಳಿದ ಹಾಗೆ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.


ಆ ಬಂಡಿ ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ಒಂದು ದೊಡ್ಡ ಕಲ್ಲಿನ ಬಳಿ ಬಂದು ನಿಂತಿತು. ಅವರು ಅಲ್ಲಿಗೆ ಹೋಗಿ, ಬಂಡಿಯ ಕಟ್ಟಿಗೆಗಳನ್ನು ಮುರಿದು, ಅಗ್ನಿ ಮಾಡಿ ಆ ಹಸುಗಳನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ಅರ್ಪಿಸಿದರು.


ಆಗ ಅರೌನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದುದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಬಲಿದಾನಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು