Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:27 - ಕನ್ನಡ ಸತ್ಯವೇದವು C.L. Bible (BSI)

27 ಅಂತೆಯೇ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಸರ್ವೇಶ್ವರನು ಹೇಳಿದ ಹಾಗೆ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ, ಊರಿನವರಿಗೂ ಹೆದರಿಕೊಂಡಿದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಕುಟುಂಬದವರಿಗೂ ನಗರ ನಿವಾಸಿಗಳಿಗೂ ಹೆದರಿಕೊಂಡಿದ್ದರಿಂದ ಅವನು ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಅವನು ತನ್ನ ತಂದೆಯ ಮನೆಯವರೆಗೂ, ಆ ಊರಿನ ಮನುಷ್ಯರಿಗೂ ಭಯಪಟ್ಟದ್ದರಿಂದ ಹಗಲಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:27
10 ತಿಳಿವುಗಳ ಹೋಲಿಕೆ  

ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ.


ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II


ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು.


ಊರಿನ ಜನರು ಬೆಳಿಗ್ಗೆ ಎದ್ದು ಬಾಳನ ಬಲಿಪೀಠ ಕೆಡವಲಾಗಿರುವುದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭ ಕಡಿಯಲಾಗಿರುವುದನ್ನೂ ಹೊಸದಾಗಿ ಕಟ್ಟಿದ ಬಲಿಪೀಠದ ಮೆಲೆ ಎರಡನೆಯ ಹೋರಿ ಬಲಿಯಾದದ್ದನ್ನೂ ಕಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು