Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:6 - ಕನ್ನಡ ಸತ್ಯವೇದವು C.L. Bible (BSI)

6 ಆ ಮಿದ್ಯಾನ್ಯರ ನಿಮಿತ್ತ ಇಸ್ರಯೇಲರು ಬಹಳವಾಗಿ ಕುಗ್ಗಿಹೋಗಿ ಸರ್ವೇಶ್ವರನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರು ವಿುದ್ಯಾನ್ಯರ ದೆಸೆಯಿಂದ ಬಲು ಕುಗ್ಗಿ ಹೋಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರು ಮಿದ್ಯಾನ್ಯರಿಂದಾಗಿ ತುಂಬ ಬಡವರಾಗಿ ಬಿಟ್ಟರು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದಕಾರಣ ಇಸ್ರಾಯೇಲರು ಮಿದ್ಯಾನ್ಯರಿಂದ ಬಹಳ ಬಡವರಾದರು. ಆಗ ಇಸ್ರಾಯೇಲರು ಯೆಹೋವ ದೇವರಿಗೆ ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:6
13 ತಿಳಿವುಗಳ ಹೋಲಿಕೆ  

ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್.


ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.


ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II


ನಿಮ್ಮ ಮಧ್ಯೆಯಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆ ಆಗುತ್ತಾ ಹೀನಸ್ಥಿತಿಗೆ ಇಳಿಯುವಿರಿ.


ಹೀಗೆ ಮಿದ್ಯಾನ್ಯರ ಕಾಟವನ್ನು ತಾಳಲಾಗದೆ ಇಸ್ರಯೇಲರು ಮೊರೆಯಿಟ್ಟಾಗ ಸರ್ವೇಶ್ವರ ಅವರಿಗೊಬ್ಬ ಪ್ರವಾದಿಯನ್ನು ಕಳುಹಿಸಿದರು.


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಆಗ ಅವರು ಸರ್ವೇಶ್ವರನಿಗೆ, “ನಾವು ನಮ್ಮ ದೇವರಾದ ನಿಮ್ಮನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವೆ,” ಎಂದು ಮೊರೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು