Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:16 - ಕನ್ನಡ ಸತ್ಯವೇದವು C.L. Bible (BSI)

16 ಅಲ್ಲದೆ, ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪುಮಾಡಿ ಪ್ರತಿ ಒಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಜಡಗಿರುವ ಬರಿಕೊಡವನ್ನೂ ಕೊಟ್ಟು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಜಡಗಿರುವ ಬರಿಕೊಡವನ್ನೂ ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಮೇಲೆ ಗಿದ್ಯೋನನು ಆ ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಮುನ್ನೂರು ಜನರನ್ನು ಮೂರು ಭಾಗವಾಗಿ ಹಂಚಿ, ಎಲ್ಲರ ಕೈಯಲ್ಲಿ ತುತೂರಿಗಳನ್ನೂ, ಬರಿದಾದ ಕೊಡಗಳನ್ನೂ, ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:16
6 ತಿಳಿವುಗಳ ಹೋಲಿಕೆ  

ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ಅಲ್ಲಿ ತನ್ನ ದಂಡನ್ನು ಇಬ್ಭಾಗವಾಗಿ ವಿಂಗಡಿಸಿ ರಾತ್ರಿವೇಳೆಯಲ್ಲಿ ಶತ್ರುಗಳ ಮೇಲೆ ಬಿದ್ದು ಸೋಲಿಸಿದನು. ಅಲ್ಲದೆ ದಮಸ್ಕಸ್ ಪಟ್ಟಣದ ಉತ್ತರಕ್ಕಿರುವ ಹೋಬಾ ಊರಿನತನಕ ಹಿಂದಟ್ಟಿದನು.


ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಸರ್ವೇಶ್ವರನಿಗೆ ಅಡ್ಡಬಿದ್ದು ಇಸ್ರಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು, ಅವರಿಗೆ, “ಏಳಿ, ಸರ್ವೇಶ್ವರ ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ,” ಎಂದನು.


“ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವು ಮಾಡಬೇಕು.


ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಂಗಡವಾಗಿ ವಿಂಗಡಿಸಿದನು. ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ದಾಳಿಮಾಡಿ ಮಧ್ಯಾಹ್ನದವರೆಗೆ ಅವರನ್ನು ಸದೆಬಡಿದನು. ಅಳಿದುಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.


ಅವನು ಸೈನ್ಯವನ್ನು ಮೂರು ಪಂಗಡಗಳಾಗಿ ವಿಭಾಗಿಸಿ ಒಂದು ಪಂಗಡವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನೂ ನಿಮ್ಮ ಸಂಗಡ ಬರುತ್ತೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು