Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:20 - ಕನ್ನಡ ಸತ್ಯವೇದವು C.L. Bible (BSI)

20 ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಸರ್ವೇಶ್ವರನಿಗೆ ಪರಾಕು” ಎಂದು ಕೂಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು - ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಗಿದ್ಯೋನನ ಮೂರು ಗುಂಪಿನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ತಮ್ಮ ಮಡಕೆಗಳನ್ನು ಒಡೆದುಹಾಕಿದರು. ಅವರು ಪಂಜುಗಳನ್ನು ತಮ್ಮ ಎಡಗೈಗಳಲ್ಲಿಯೂ ತುತ್ತೂರಿಗಳನ್ನು ತಮ್ಮ ಬಲಗೈಗಳಲ್ಲಿಯೂ ಹಿಡಿದುಕೊಂಡರು. ಅವರು ತಮ್ಮ ತುತ್ತೂರಿಗಳನ್ನು ಊದುತ್ತಾ “ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ, ಆ ಕೊಡಗಳನ್ನು ಒಡೆದುಬಿಟ್ಟು, ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ, ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು, “ಯೆಹೋವ ದೇವರಿಗಾಗಿ ಖಡ್ಗ, ಗಿದ್ಯೋನನಿಗಾಗಿ ಖಡ್ಗ,” ಎಂದು ಕೂಗಿ ಪಾಳೆಯ ಸುತ್ತಲೂ ಅವರವರ ಸ್ಥಳದಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:20
14 ತಿಳಿವುಗಳ ಹೋಲಿಕೆ  

ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ಕೂಡಲೆ ಜನರು ಆರ್ಭಟಿಸಿದರು. ಕೊಂಬುಗಳು ಮೊಳಗಿದವು. ಕೊಂಬಿನ ಧ್ವನಿ ಕೇಳಿ ಜನರು ಇನ್ನೂ ಗಟ್ಟಿಯಾಗಿ ಆರ್ಭಟಿಸಿದರು. ನಗರದ ಗೋಡೆ ತಾನಾಗಿ ಬಿದ್ದುಹೋಯಿತು. ಪ್ರತಿ ಒಬ್ಬನೂ ನೆಟ್ಟಗೆ ನಗರಕ್ಕೆ ನುಗ್ಗಿದನು. ಅದು ಅವರ ಸ್ವಾಧೀನವಾಯಿತು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಿದರು. ಯೆಹೋಶುವ ಜನರಿಗೆ, “ಆರ್ಭಟಿಸಿರಿ, ಸರ್ವೇಶ್ವರಸ್ವಾಮಿ ನಿಮಗೆ ಈ ನಗರವನ್ನು ಕೊಟ್ಟಿದ್ದಾರೆ.


ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.


ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ನನ್ನ ಮರಣಾ ನಂತರವೂ ಈ ವಿಷಯಗಳನ್ನು ನೀವು ಯಾವಾಗಲೂ ಜ್ಞಾಪಕಕ್ಕೆ ತಂದುಕೊಳ್ಳಲು ಸಾಧ್ಯವಾಗುವಂತೆ ಈಗಲೇ ನನ್ನಿಂದಾದಷ್ಟು ಪ್ರಯತ್ನಿಸುತ್ತೇನೆ.


ಮಧ್ಯರಾತ್ರಿ ಪ್ರಾರಂಭವಾಗುತ್ತಿದ್ದಂತೆ ಮೊದಲ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನು ಮತ್ತು ಅವನ ಸಂಗಡ ಇದ್ದ ನೂರುಮಂದಿ (ಶತ್ರುಗಳ) ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ, ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.


ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಗಲಿಬಿಲಿಗೊಂಡು ಚೀರುತ್ತಾ ಓಡಿಹೋಗಲು ಆರಂಭಿಸಿದರು.


ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಂಗಡವಾಗಿ ವಿಂಗಡಿಸಿದನು. ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ದಾಳಿಮಾಡಿ ಮಧ್ಯಾಹ್ನದವರೆಗೆ ಅವರನ್ನು ಸದೆಬಡಿದನು. ಅಳಿದುಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.


ಎಲೈ, ಸರ್ವೇಶ್ವರನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದಿರುವೆ? ಓರೆಯಲ್ಲಿ ಅವಿತುಕೊಂಡರು, ಶಾಂತಿಗೊಳ್ಳು, ಸುಮ್ಮನಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು