Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:3 - ಕನ್ನಡ ಸತ್ಯವೇದವು C.L. Bible (BSI)

3 ಆದ್ದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, “ಭಯಬೀತರೂ ಅಂಜುಬುರುಕರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ,’ ಎಂದು ಪ್ರಕಟಿಸು,” ಎಂದರು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ - ಧೈರ್ಯವಿಲ್ಲದವರೂ ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕಾಗಿ ಈಗ, ‘ಭಯಪಡುವವರೆಲ್ಲರು ಗಿಲ್ಯಾದ್ ಬೆಟ್ಟವನ್ನು ಬಿಟ್ಟುಹೋಗಬಹುದು’ ಎಂದು ಪ್ರಕಟಿಸು” ಎಂದು ಹೇಳಿದನು. ಆ ಸಮಯದಲ್ಲಿ ಇಪ್ಪತ್ತೆರಡು ಸಾವಿರ ಜನರು ಗಿದ್ಯೋನನನ್ನು ಬಿಟ್ಟು ಮನೆಗೆ ಹಿಂದಿರುಗಿದರು. ಆದರೆ ಇನ್ನೂ ಹತ್ತು ಸಾವಿರ ಜನರು ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನೀನು ಹೋಗಿ ಜನರು ಕೇಳುವ ಹಾಗೆ, ‘ಯಾವನಿಗೆ ಭಯವೂ, ಹೆದರಿಕೆಯೂ ಉಂಟೋ ಅವನು ತಿರುಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ,’ ಎಂದು ಪ್ರಕಟಮಾಡು,” ಎಂದರು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ಜನರು ತಿರುಗಿ ಹೋದರು; ನಂತರ ಹತ್ತು ಸಾವಿರ ಜನರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:3
7 ತಿಳಿವುಗಳ ಹೋಲಿಕೆ  

ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಿದ್ದನು. ಅವರೂ ಕೂಡಿಬಂದರು. ಅಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ದಂಡೆಯಾತ್ರೆಗಾಗಿ ಸೇರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು