Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಪುನಃ ಗಿದ್ಯೋನನಿಗೆ, “ನಿನ್ನ ಬಳಿ ಇರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಒಂದು ಹಳ್ಳಕ್ಕೆ ಕರೆದುಕೊಂಡು ಹೋಗು; ಅಲ್ಲಿ ಅವರನ್ನು ನಿನಗಾಗಿ ಆರಿಸುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ. ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ತಿರುಗಿ ಗಿದ್ಯೋನನಿಗೆ, “ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ತಿರಿಗಿ ಗಿದ್ಯೋನನಿಗೆ - ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ಅಲ್ಲಿ ಅವರನ್ನು ನಿನಗೋಸ್ಕರ ಪರೀಕ್ಷಿಸುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು ಗಿದ್ಯೋನನಿಗೆ, “ಇನ್ನೂ ಬಹಳಷ್ಟು ಜನರಿದ್ದಾರೆ. ಇವರನ್ನು ನೀನು ನದಿಗೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗಾಗಿ ಪರೀಕ್ಷಿಸುತ್ತೇನೆ. ‘ಯಾವನು ನಿನ್ನ ಜೊತೆಯಲ್ಲಿ ಹೋಗಬಹುದು’ ಎಂದು ನಾನು ಹೇಳುತ್ತೇನೋ ಅವನು ಹೋಗಲಿ. ‘ಯಾವನು ನಿನ್ನ ಜೊತೆಯಲ್ಲಿ ಹೋಗುವುದು ಬೇಡ’ ಎಂದು ನಾನು ಹೇಳುತ್ತೇನೋ ಅವನು ಹೋಗದಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಗಿದ್ಯೋನನಿಗೆ, “ಜನರು ಇನ್ನೂ ತುಂಬ ಇದ್ದರೆ; ಅವರನ್ನು ಹತ್ತಿರದ ಹಳ್ಳಕ್ಕೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡಿ ಆರಿಸುವೆನು. ನಿನ್ನ ಸಂಗಡ ಹೋಗುವವರಲ್ಲಿ ಯಾವನನ್ನು ಕುರಿತು ಹೇಳುವೆನೋ, ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು ನಿನ್ನ ಸಂಗಡ ಬರಬಾರದೆಂದು ಯಾವನನ್ನು ಕುರಿತು ಹೇಳುವೆನೋ, ಅವನು ಹೋಗಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:4
10 ತಿಳಿವುಗಳ ಹೋಲಿಕೆ  

ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಹೇ ದೇವಾ, ನೀ ನಮ್ಮನ್ನು ಪರಿಶೋಧಿಸಿದೆ I ಪುಟಕ್ಕಿಟ್ಟ ಚಿನ್ನದಂತೆ ಶುದ್ಧೀಕರಿಸಿದೆ II


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.


ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಸರ್ವೇಶ್ವರ ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು