Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:1 - ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಎಫ್ರಯಿಮ್ಯರು ಗಿದ್ಯೋನನಿಗೆ, “ನೀನು ಹೀಗೇಕೆ ಮಾಡಿದೆ? ಮಿದ್ಯಾನ್ಯರೊಡನೆ ಯುದ್ಧ ಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರ ವಾಗ್ವಾದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ - ನೀನು ಹೀಗೆ ಯಾಕೆ ಮಾಡಿದಿ? ವಿುದ್ಯಾನ್ಯರೊಡನೆ ಯುದ್ಧಮಾಡುವದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ ಎಂದು ಉಗ್ರದಿಂದ ಕಲಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆ ವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಎಫ್ರಾಯೀಮ್ಯರು, “ನೀನು ಮಿದ್ಯಾನ್ಯರ ಮೇಲೆ ಯುದ್ಧಮಾಡುವುದಕ್ಕೆ ಹೋಗುವಾಗ, ನಮ್ಮನ್ನು ಕರೆಯದೆ ಹೋದದ್ದೇನು?” ಎಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:1
9 ತಿಳಿವುಗಳ ಹೋಲಿಕೆ  

ಆಗ ಇಸ್ರಯೇಲರೆಲ್ಲರು ಅರಸನ ಮುಂದೆ ಬಂದು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸರನ್ನೂ ಅವರ ಮನೆಯವರನ್ನೂ ಅವರೊಡನೆ ಇದ್ದ ಜನರನ್ನೂ ಜೋರ್ಡನ್ ನದಿದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸರಿಸಮಾನ ಆದದ್ದನ್ನು ನಾನೇನು ಮಾಡಿದೆ? ಅಭೀಯಿಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಯಿಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


ಅದಕ್ಕೆ ಯೆಹೂದ್ಯರೆಲ್ಲರು, “ಅರಸರು ನಮಗೆ ಸಮೀಪಬಂಧು; ನೀವು ಅದಕ್ಕಾಗಿ ಸಿಟ್ಟುಗೊಳ್ಳುವುದೇಕೆ? ನಾವೇನು ಅರಸರ ಖರ್ಚಿನಿಂದ ಊಟಮಾಡಿದೆವೋ? ಅವರು ನಮಗೆ ಏನಾದರೂ ಕೊಟ್ಟಿರುವರೋ?’ ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು