Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:10 - ಕನ್ನಡ ಸತ್ಯವೇದವು C.L. Bible (BSI)

10 ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜೆಬಹ, ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳುಕೊಂಡಿದ್ದರು. ಮೂಡಣ ದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:10
17 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರೂ ಅಮಾಲೇಕ್ಯರೂ ಪೂರ್ವದೇಶದವರೂ ಮಿಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳುನೂರು ಮಂದಿ ಯೋಧರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಪ್ರಯತ್ನಿಸಿದನು; ಆದರೆ ಆಗದೆ ಹೋಯಿತು.


ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಯೋಧರು ಸಂಹೃತರಾದರು.)


ಸರ್ವೇಶ್ವರ ಇಸ್ರಯೇಲರಿಗೆ ಜಯಕೊಟ್ಟದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಯೋಧರನ್ನು ಕೊಂದುಹಾಕಿದರು.


ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.


ಬೆನ್ಯಾಮೀನ್ಯರಲ್ಲದ ಇಸ್ರಯೇಲರಲ್ಲಿ ನಾಲ್ಕು ಲಕ್ಷ ಯೋಧರು ಇದ್ದರು; ಇವರೆಲ್ಲರು ವೀರರೇ.


ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆ ಇಪ್ಪತ್ತಾರು ಸಾವಿರ. ಇವರಲ್ಲದೆ ಗಿಬೆಯದಲ್ಲಿಯೇ ಏಳುನೂರು ಮಂದಿ ಯುದ್ಧವೀರರಿದ್ದರು.


ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?


ಇದಲ್ಲದೆ, ಇಸ್ರಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು, ಸಮಾರಿಯಕ್ಕೆ ಒಯ್ದರು.


ರೆಮಲ್ಯನ ಮಗ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರು ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣವಾಗಿತ್ತು.


ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸದೆಬಡಿದರು. ಇಸ್ರಯೇಲ್ ಯೋಧರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ .


ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು.


ಗಿದ್ಯೋನನು ಕಾಡುಗೊಲ್ಲರ ಪ್ರದೇಶ ಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳಿದುಕೊಂಡಿದ್ದ ಆ ಪಾಳೆಯದ ಮೇಲೆ ದಾಳಿಮಾಡಿದನು.


ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆ; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿ ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿಬಿಟ್ಟಿತು,” ಎಂದು ಹೇಳಿದನು. ಅವನ ಜೊತೆಗಾರನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು