Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:11 - ಕನ್ನಡ ಸತ್ಯವೇದವು C.L. Bible (BSI)

11 ಗಿದ್ಯೋನನು ಕಾಡುಗೊಲ್ಲರ ಪ್ರದೇಶ ಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳಿದುಕೊಂಡಿದ್ದ ಆ ಪಾಳೆಯದ ಮೇಲೆ ದಾಳಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಗಿದ್ಯೋನ ಮತ್ತು ಅವನ ಸೈನಿಕರು ಕಾಡುಗೊಲ್ಲರ ಪ್ರದೇಶದ ಮಾರ್ಗವನ್ನು ಬಳಸಿದರು. ಆ ಮಾರ್ಗವು ನೋಬಹ, ಯೊಗ್ಬೆಹಾ ನಗರಗಳ ಪೂರ್ವಕ್ಕೆ ಇದೆ. ಗಿದ್ಯೋನನು ಕರ್ಕೋರ ನಗರಕ್ಕೆ ಬಂದು ಶತ್ರುಗಳ ಮೇಲೆ ಧಾಳಿ ಮಾಡಿದನು. ಶತ್ರುಸೈನ್ಯವು ಈ ಧಾಳಿಯನ್ನು ನಿರೀಕ್ಷಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಪೂರ್ವದಲ್ಲಿದ್ದ ಡೇರೆಗಳಲ್ಲಿ ಸುರಕ್ಷಿತವಾಗಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಅವರು ನಿರೀಕ್ಷಿಸದ ಸಮಯದಲ್ಲಿ ಅವರ ಮೇಲೆ ದಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:11
8 ತಿಳಿವುಗಳ ಹೋಲಿಕೆ  

ನೋಬಹನು ಯುದ್ಧಮಾಡಿ ಕೆನಾತ್ ಎಂಬ ಪಟ್ಟಣವನ್ನೂ ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿದನು. ಆ ಪಟ್ಟಣಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.


ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮಾ,


ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು, ಲಯಿಷಿಗೆ ಹೋಗಿ, ಅಲ್ಲಿ ಸುಖದಿಂದಲೂ ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು ಅವರನ್ನು ಕತ್ತಿಯಿಂದ ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟರು.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಅವರು ಅಲ್ಲಿಗೆ ಹೋದಾಗ ಆ ದಾಳಿಕಾರರು ತಮಗೆ ಫಿಲಿಷ್ಟಿಯ ಹಾಗು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ್ದ ದೊಡ್ಡಕೊಳ್ಳೆಯ ನಿಮಿತ್ತ ಸಂತೋಷಿಸಿ, ತಿಂದು, ಕುಡಿದು, ಕುಣಿದಾಡುತ್ತಾ ಅಲ್ಲಿನ ಬಯಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.


ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ.


ಜೆಬಹನೂ ಚಲ್ಮುನ್ನನೂ ಓಡಿಹೋಗುವಾಗ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು