Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:18 - ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ಅವನು ಜೆಬಹ, ಚಲ್ಮುನ್ನ ಎಂಬವರನ್ನು - ನೀವು ತಾಬೋರದಲ್ಲಿ ಕೊಂದು ಹಾಕಿದ ಮನುಷ್ಯರು ಹೇಗಿದ್ದರು ಎಂದು ಕೇಳಲಾಗಿ ಅವರು ಅವನಿಗೆ - ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಮೇಲೆ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನರನ್ನು, “ನೀವು ತಾಬೋರ್ ಪರ್ವತದಲ್ಲಿ ಕೆಲವು ಜನರನ್ನು ಕೊಂದಿರುವಿರಿ. ಅವರು ಹೇಗಿದ್ದರು?” ಎಂದು ಕೇಳಿದನು. ಅವರು “ನಿನ್ನ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬನೂ ಒಬ್ಬ ರಾಜಕುಮಾರನಂತೆ ಕಂಡನು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:18
10 ತಿಳಿವುಗಳ ಹೋಲಿಕೆ  

ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಉತ್ತರ ದಕ್ಷಿಣಗಳನುಂಟು ಮಾಡಿದವನು ನೀನು I ಸ್ತುತಿಸುತ್ತವೆ ತಾಬೋರ್ ಹೆರ್‍ಮೊನ್ ನಿನ್ನ ನಾಮವನು II


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು.


ಮತ್ತು ಪೆನೂವೇಲಿನ ಗೋಪುರವನ್ನು ಕೆಡವಿ ಬಿಟ್ಟು ಆ ಊರಿನ ಜನರನ್ನು ಕೊಂದುಹಾಕಿದನು.


ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಸರ್ವೇಶ್ವರನ ಆಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದು ಹೇಳಿ


ಅಬೀನೋವಮನ ಮಗ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನ ಸೀಸೆರನಿಗೆ ಮುಟ್ಟಿದಾಗ


ಅದಕ್ಕೆ ಅರಸನು, “ನಿಮ್ಮನ್ನು ಭೇಟಿಯಾಗಿ ಹೀಗೆಂದು ನುಡಿದ ಆ ವ್ಯಕ್ತಿ ಹೇಗಿದ್ದನು?” ಎಂದು ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು