Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:22 - ಕನ್ನಡ ಸತ್ಯವೇದವು C.L. Bible (BSI)

22 ತರುವಾಯ ಇಸ್ರಯೇಲರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲವೇ? ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ - ನೀನು ನಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲಿಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರಿಂದ ರಕ್ಷಿಸಿರುವೆ. ಅದಕ್ಕಾಗಿ ಈಗ ನಮ್ಮ ಮೇಲೆ ಆಳ್ವಿಕೆ ಮಾಡು. ನೀನೂ ನಿನ್ನ ಮಗನೂ ನಿನ್ನ ಮೊಮ್ಮಗನೂ ನಮ್ಮನ್ನು ಆಳಬೇಕೆಂಬುದು ನಮ್ಮ ಆಶೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ, ನೀನೂ, ನಿನ್ನ ಪುತ್ರನೂ, ನಿನ್ನ ಪುತ್ರನ ಪುತ್ರನೂ ನಮ್ಮನ್ನು ಆಳಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:22
7 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಸರ್ವೆಶ್ವರ ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.


“ತಾವಂತೂ ಮುದುಕರಾದಿರಿ; ನಿಮ್ಮ ಮಕ್ಕಳು ನಿಮ್ಮ ಮಾರ್ಗದಲ್ಲಿ ನಡೆಯುವುದಿಲ್ಲ. ಆದುದರಿಂದ ಬೇರೆ ಎಲ್ಲ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿ; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ,” ಎಂದರು.


ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ಆಗ ಜೆಬಹನು ಹಾಗು ಚಲ್ಮುನ್ನನು ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದೆ ಅಲ್ಲವೆ?” ಎನ್ನಲು ಅವನೆದ್ದು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೊಂದುಹಾಕಿ ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಸರ್ವೇಶ್ವರನೇ ನಿಮ್ಮ ಅರಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು