Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:26 - ಕನ್ನಡ ಸತ್ಯವೇದವು C.L. Bible (BSI)

26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಯೇಲರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ 20 ಕಿಲೋಗ್ರಾಂ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ವಿುದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಭರಣಗಳೂ, ಕಂಠಮಾಲೆಗಳೂ, ಮಿದ್ಯಾನರ ಅರಸರು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ, ಅವರ ಒಂಟೆಗಳ ಕೊರಳೊಳಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದುಕೊಂಡ ಬಂಗಾರದ ಓಲೆಗಳ ತೂಕವು ಇಪ್ಪತ್ತು ಕಿಲೋಗ್ರಾಂ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:26
14 ತಿಳಿವುಗಳ ಹೋಲಿಕೆ  

“ಅಯ್ಯೋ ! ಅಯ್ಯೋ ! ಮಹಾನಗರಿ ನಿನಗೆಂಥಾ ದುರ್ಗತಿ ! ಕೆನ್ನೀಲಿಯ ಕಡುಗೆಂಪಿನ ನಯವಸ್ತ್ರಗಳನುಟ್ಟವಳೇ, ಹೊನ್ನ ತೊಟ್ಟವಳೇ, ಮತ್ತು ರತ್ನಾಭರಣಗಳನು ಧರಿಸಿದವಳೇ, ತಾಸೊಂದರಲೇ ನಿನ್ನ ಐಸಿರಿಯೆಲ್ಲಾ ವ್ಯರ್ಥವಾಯಿತೇ!” ಎಂದು ದುಃಖಿಸಿ ಅತ್ತು ಗೋಳಾಡುವರು.


ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು.


ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ !” ಎಂದನು.


ಸೈನಿಕರೋ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಗೆ ಮುಡಿಸಿ, ಕೆನ್ನೇರಳೆ ಬಣ್ಣದ ಅಂಗಿಯನ್ನು ಅವರಿಗೆ ಉಡಿಸಿ, ಹತ್ತಿರ ಬಂದು,


ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.


ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ನಿನ್ನ ಹಾಯಿ ನಿನಗೆ ಧ್ವಜವಾಗಲೆಂದೆ ಮಾಡಿಹರು ಈಜಿಪ್ಟಿನ ಕಸೂತಿಯ ನಾರುಮಡಿಯಿಂದ. ನಿನ್ನ ಮೇಲ್ಕಟ್ಟು ಚಿತ್ರಿತವಾಗಿದೆ ಎಲೀಷ ಕರಾವಳಿಯ ಊದಾ ಕಡುಗೆಂಪುಗಳಿಂದ.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಆಗ ಜೆಬಹನು ಹಾಗು ಚಲ್ಮುನ್ನನು ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದೆ ಅಲ್ಲವೆ?” ಎನ್ನಲು ಅವನೆದ್ದು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೊಂದುಹಾಕಿ ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ಗಿದ್ಯೋನಿನ ಬಿನ್ನಹಕ್ಕೆ ಇಸ್ರಯೇಲರು, “ನಾವು ಸಂತೋಷದಿಂದ ಕೊಡುತ್ತೇವೆ,” ಎಂದು ಹೇಳಿ ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಮುರುವುಗಳನ್ನು ಇಟ್ಟರು.


ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.


ತನಗೆ ಬೇಕಾದ ರತ್ನಗಂಬಳಿಯನ್ನು ತಾನೆ ನೇಯ್ದಿದ್ದಾಳೆ; ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.


ದಿನ ಬರುವುದು, ಆಗ ಸ್ವಾಮಿ ಅವರ ಬೆಡಗಿನ ಆಭರಣಗಳೆಲ್ಲವನ್ನು ತೆಗೆದುಹಾಕುವರು. ಕಾಲಂದಿಗೆ, ತುರುಬು, ಬಲೆ, ಅರ್ಧಚಂದ್ರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು