Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:27 - ಕನ್ನಡ ಸತ್ಯವೇದವು C.L. Bible (BSI)

27 ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದರಿಂದ ಇಸ್ರಾಯೇಲ್ಯರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಗಿದ್ಯೋನನು ಈ ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಆ ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:27
26 ತಿಳಿವುಗಳ ಹೋಲಿಕೆ  

ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ‘ಏಫೋದು’, ದೇವತಾಪ್ರತಿಮೆಗಳು, ಕೆತ್ತನೆಯ ಮತ್ತು ಎರಕದ ವಿಗ್ರಹಗಳು ಇರುತ್ತವೆ ಎಂಬುದು ನಿಮಗೆ ಗೊತ್ತುಂಟೇ?


ಈ ಮೀಕನು ‘ಏಫೋದ’ನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.


ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ‘ಏಫೋದ’ನ್ನೂ ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.


ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ಅವರು ನಿಮ್ಮ ನಾಡಿನಲ್ಲಿ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯೆ ನಿಮಗೆ ಉರುಲಾಗುವುದು.


ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II


ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಯೇಲರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ 20 ಕಿಲೋಗ್ರಾಂ ತೂಕವಾಗಿತ್ತು.


ಮಿದ್ಯಾನ್ಯರು ಇಸ್ರಯೇಲರ ಮುಂದೆ ಬಹಳವಾಗಿ ತಗ್ಗಿಹೋದರು. ಅವರು ಮರಳಿ ತಲೆಯೆತ್ತಲಾಗಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರ್ಷಗಳ ಕಾಲಪರ್ಯಂತ ದೇಶದಲ್ಲಿ ಶಾಂತಿಸಮಾಧಾನವಿತ್ತು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.


ಅದೂ ಅಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಹೆಣ್ಣುಗಳನ್ನು ತೆಗೆದುಕೊಳ್ಳುವುದಕ್ಕೆ ಆಸ್ಪದವುಂಟಾಗುವುದು. ಅನಂತರ ಆ ಸೊಸೆಯಂದಿರು ತೌರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನು ಅನ್ಯದೇವರುಗಳ ಪೂಜೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು. ಆದ್ದರಿಂದ ಎಚ್ಚರಿಕೆಯಾಗಿರಿ.


ಆಗ, ನೀವು ಈ ನಾಡಿನ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು, ಅವರ ಬಲಿಪೀಠಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೇಕೆ ಮಾಡಿದಿರಿ?


ನೀವು ಹೀಗೆ ಮಾಡುವುದಾದರೆ ನಾನು ಈ ನಾಡಿನ ನಿವಾಸಿಗಳನ್ನು ನಿಮ್ಮಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮನ್ನು ಉಪದ್ರವಪಡಿಸುವರು. ಅವರ ದೇವತೆಗಳು ನಿಮ್ಮನ್ನು ತಮ್ಮ ಉರುಳಿನಲ್ಲಿ ಸಿಕ್ಕಿಸಿಕೊಳ್ಳುವುವು ಎಂದು ನಿಮಗೆ ಮೊದಲೇ ಹೇಳಿದ್ದೇನೆ” ಎಂದನು.


ಅನ್ಯಜನರೊಡನವರು ಕಲೆತು ಬೆರೆತುಹೋದರು I ಅವರ ದುರಾಚಾರಗಳನ್ನೂ ಕಲಿತುಕೊಂಡರು II


“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು