Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:32 - ಕನ್ನಡ ಸತ್ಯವೇದವು C.L. Bible (BSI)

32 ಯೋವಾಷನ ಮಗನಾದ ಗಿದ್ಯೋನನು ಹಣ್ಣು ಹಣ್ಣು ಮುದುಕನಾಗಿ ಮರಣಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿ ಅವನ ತಂದೆ ಆದ ಯೋವಾಷನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೋವಾಷನ ಮಗನಾದ ಗಿದ್ಯೋನನು ದಿನ ತುಂಬಿದ ಮುದುಕನಾಗಿ ಮರಣಹೊಂದಿದನು. ಗಿದ್ಯೋನನ ಶವವನ್ನು ಅವನ ತಂದೆಯಾದ ಯೋವಾಷನಿಗೆ ಸೇರಿದ್ದ ಒಂದು ಸಮಾಧಿಯಲ್ಲಿ ಹೂಳಿಟ್ಟರು. ಆ ಸಮಾಧಿಯು ಅಬೀಯೆಜೆರ್ ಕುಟುಂಬದವರ ಒಫ್ರದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೋವಾಷನ ಮಗನಾದ ಗಿದ್ಯೋನನು ಒಳ್ಳೆಯ ವೃದ್ಧಾಪ್ಯದಲ್ಲಿ ಮರಣಹೊಂದಿದಾಗ, ಅವನನ್ನು ಅಬೀಯೆಜೆರೀಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಳಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:32
10 ತಿಳಿವುಗಳ ಹೋಲಿಕೆ  

ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.


ಹಣ್ಣು ಹಣ್ಣು ಮುದುಕನಾಗಿ ಸತ್ತನು.


ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.


ಅವನಿಗೆ ಶೆಕೆಮಿನಲ್ಲಿ ಇದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗ ಹುಟ್ಟಿದನು. ಅವನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.


ಗಿದ್ಯೋನನು ಸತ್ತನಂತರ ಇಸ್ರಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್ ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.


ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೆತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು