Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:5 - ಕನ್ನಡ ಸತ್ಯವೇದವು C.L. Bible (BSI)

5 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:5
11 ತಿಳಿವುಗಳ ಹೋಲಿಕೆ  

ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು.


ಗರ್ಭಗುಡಿಯಿಂದಲೇ ದೇವನಿಂತೆಂದನು; “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದು ಕೊಡುವೆನು ಸುಖೋತೆಂಬ ಬಯಲನು II


ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೀ ಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು, ಇವುಗಳನ್ನೆಲ್ಲ ಕತ್ತೆಗಳ ಮೇಲೆ ಹೇರಿಸಿದಳು.


ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.


ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:


ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ.


ಜೆಬಹನೂ ಚಲ್ಮುನ್ನನೂ ಓಡಿಹೋಗುವಾಗ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿಬಿಟ್ಟನು.


ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “’ದಣಿದಿರುವ ನಿನ್ನ ಸೈನಿಕರಿಗಾಗಿ ನಾವು ರೊಟ್ಟಿ ಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ?,’ ಎಂದು ನನ್ನನ್ನು ನಿಂದಿಸಿದಿರಲ್ಲವೆ;


‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು