Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:24 - ಕನ್ನಡ ಸತ್ಯವೇದವು C.L. Bible (BSI)

24 ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆವಿುನವರ ಮೇಲೆಯೂ ಬರುವದಕ್ಕೆ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:24
12 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II


ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.


ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.


“ಅವರು, ‘ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆಮಾಡುತ್ತಿದ್ದರು. ಈ ವರ್ತಮಾನ ಅಬೀಮೆಲೆಕನಿಗೆ ಮುಟ್ಟಿತು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೂ ಅವನ ಸಂತಾನದವರ ತಲೆಯ ಮೇಲೂ ಇರಲಿ; ಆದರೆ ದಾವೀದನಿಗೂ ಅವನ ಸಿಂಹಾಸನವನ್ನೇರುವ ಸಂತಾನದವರಿಗೂ ಸರ್ವೇಶ್ವರನಿಂದ ನಿತ್ಯಸೌಭಾಗ್ಯ ದೊರಕಲಿ!” ಎಂದನು.


ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು