Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:49 - ಕನ್ನಡ ಸತ್ಯವೇದವು C.L. Bible (BSI)

49 ಅವರೂ ಅದರಂತೆಯೇ ಮಾಡಿದರು. ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಸ್ತ್ರೀಪುರುಷರೆಲ್ಲಾ ಸೇರಿ ಅವರು ಸುಮಾರು ಸಾವಿರ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‌ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಅವರೂ ಅದರಂತೆಯೇ ಮಾಡಿ ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‍ಕೋಟೆಯವರೆಲ್ಲರೂ ಸತ್ತರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್‌ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಆ ಕೊಂಬೆಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಸೈನಿಕರೆಲ್ಲರಲ್ಲಿ ಒಬ್ಬೊಬ್ಬನು ಒಂದೊಂದು ಕೊಂಬೆಯನ್ನು ಕಡಿದು, ಅಬೀಮೆಲೆಕನ ಹಿಂದೆ ಹೋಗಿ, ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ, ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಜನರು ಸತ್ತುಹೋದರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:49
6 ತಿಳಿವುಗಳ ಹೋಲಿಕೆ  

ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ಇರುವ ಕಡೆಗಳಲ್ಲೆಲ್ಲಾ ನಾನಾವಿಧವಾದ ಅಕ್ರಮಗಳೂ ದುಶ್ಚಟಗಳು ಇರುತ್ತವೆ.


ಆದರೆ ನೀವು ನಿಮ್ಮ ಕಚ್ಚಾಟ, ಕಿತ್ತಾಟ, ನುಂಗಾಟ - ಇವುಗಳನ್ನು ನಿಲ್ಲಿಸದಿದ್ದರೆ ಒಬ್ಬರಿಂದೊಬ್ಬರು ವಿನಾಶವಾದೀರಿ ಎಚ್ಚರಿಕೆ!


ಇಲ್ಲವಾದರೆ, ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ಸುಟ್ಟುಬಿಡಲಿ; ಶೆಕೆಮಿನವರಿಂದಲೂ ಮಿಲ್ಲೋ ಕೋಟೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ಸುಟ್ಟುಬಿಡಲಿ.”


ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.


ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ,” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಂಡನು.


ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ, ಮುತ್ತಿಗೆ ಹಾಕಿ ಅದನ್ನು ಹಿಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು