Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:54 - ಕನ್ನಡ ಸತ್ಯವೇದವು C.L. Bible (BSI)

54 ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:54
17 ತಿಳಿವುಗಳ ಹೋಲಿಕೆ  

ಅಬೀಮೆಲೆಕನು ಸತ್ತುಹೋದದ್ದನ್ನು ಕಂಡು ಇಸ್ರಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.


ಆಯುಧಗಳನ್ನು ಹೊರುವವನು, “ನಿಮ್ಮ ಇಷ್ಟದಂತೆ ಮಾಡಿ; ನಿಮ್ಮ ಕೋರಿಕೆಯ ಹಾಗೆ ನಾನೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.


ಆ ಫಿಲಿಷ್ಟಿಯರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿ; ನಿಮಗೆ ತೋರಿಸಬೇಕಾದದ್ದೊಂದಿದೆ,” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಸರ್ವೇಶ್ವರ ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿದ್ದಾರೆ,” ಎಂದು ಹೇಳಿದನು.


ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಮೊಣಕಾಲನ್ನು ಹಾಗು ಕೈಗಳನ್ನು ಊರುತ್ತಾ ಕಣಿವೆಯಿಂದ ಮೇಲೆ ಬಂದರು. ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕೆ ಉರುಳಿಸುತ್ತಾ ಹೋದನು; ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ನಡೆದನು.


ಹೀಗೆ ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂಮಿಯಲ್ಲೇ ಸುಮಾರು ಇಪ್ಪತ್ತು ಮಂದಿಯನ್ನು ಅವರು ವಧಿಸಿದರು.


ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿ,” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡುವಾಗ ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲದಿರುವುದು ತಿಳಿದುಬಂದಿತು.


ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿದನು, ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.


ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಆಯುಧವಾಹಕನೂ ಎಲ್ಲ ಆಳುಗಳೂ ಅದೇ ದಿವಸ ಸತ್ತರು.


ಅವರು ಕೆಳಕ್ಕೆ ಬಿದ್ದುಬಿಟ್ಟರೆ ಬದುಕಲಾರರೆಂದು ನೆನೆಸಿ ನಾನು ಅವರನ್ನು ಸಮೀಪಿಸಿ ಕೊಂದುಹಾಕಿದೆ. ಅವರ ತಲೆಯ ಮೇಲಿನ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ನನ್ನ ಒಡೆಯರಾದ ತಮ್ಮ ಬಳಿಗೆ ತಂದಿದ್ದೇನೆ,” ಎಂದನು.


ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,


ಆಗ ಅವನು ತನ್ನ ಆಯುಧವಾಹಕ ಯುವಕನನ್ನು ಕರೆದು, ‘ದೇವರಲ್ಲಿ ನಂಬಿಕೆ ಇಲ್ಲದ ಈ ಫಿಲಿಷ್ಟಿಯರ ಹಸ್ತಗಳಿಂದ ನಾನು ಸಾಯಬಾರದು. ನಿನ್ನ ಖಡ್ಗವನ್ನು ಹಿಡಿದು ನನ್ನನ್ನು ಕೊಂದುಬಿಡು’, ಎಂದನು. ಆದರೆ ಆ ಯುವಕನು ಭಯಗೊಂಡು ಹಿಂಜರಿದನು. ಸೌಲನು ತನ್ನ ಖಡ್ಗವನ್ನೇ ಎತ್ತಿಟ್ಟು ಅದರ ಮೇಲೆ ಹಾರಿಬಿದ್ದು ಸತ್ತುಹೋದನು.


ಸೌಲನು ಮೃತನಾದದ್ದನ್ನು ನೋಡಿ ಆ ಯುವಕನು ಸಹ ತನ್ನ ಖಡ್ಗದ ಮೇಲೆ ಬಿದ್ದು ಸತ್ತುಹೋದನು.


ಅಮ್ಮೋನಿನ ಚೆಲೆಕ್, ಬೇರೋತ್ಯನೂ ಚೆರೂಯಳ ಮಗ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,


ಆಕೆ, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧದಿಂದ ನಿನಗೆ ಗೌರವಗಿಟ್ಟದು; ಏಕೆಂದರೆ ಸರ್ವೇಶ್ವರ ಸೀಸೆರನನ್ನು ಒಬ್ಬ ಮಹಿಳೆಗೆ ಒಪ್ಪಿಸಿಕೊಡುವರು,” ಎಂದು ಹೇಳಿ ಬಾರಾಕನೊಡನೆ ಕೆದೆಷಿಗೆ ಹೋದಳು.


ಸೌಲ ಹಿಂದಿರುಗಿ ನನ್ನನ್ನು ಕರೆದರು.


ಆಗ ಅವರು, “ನೀನು ಮನಸ್ಸುಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಏಕೆಂದರೆ, ನನ್ನಲ್ಲಿ ಇನ್ನೂ ಪೂರ್ಣಶಕ್ತಿಯಿದ್ದರೂ ಪ್ರಾಣಸಂಕಟಕ್ಕೆ ಸಿಕ್ಕಿಕೊಂಡಿದ್ದೇನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು