Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:56 - ಕನ್ನಡ ಸತ್ಯವೇದವು C.L. Bible (BSI)

56 ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಅಬೀಮೆಲೆಕನು ತನ್ನ ತಂದೆಗೆ ವಿರೋಧವಾಗಿ ಮಾಡಿದ್ದ ಎಲ್ಲ ದುಷ್ಕೃತ್ಯಗಳಿಗಾಗಿ ಅಂದರೆ ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದು ಹಾಕಿದ್ದರಿಂದ ದೇವರು ಅವನನ್ನು ಹೀಗೆ ದಂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ, ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರುಗಿ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:56
15 ತಿಳಿವುಗಳ ಹೋಲಿಕೆ  

ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .


ಮೋಸಹೋಗದಿರಿ, ದೇವರನ್ನು ವಂಚಿಸಬಹುದೆಂದು ಭಾವಿಸದಿರಿ; ಬಿತ್ತುವುದನ್ನೇ ಕೊಯ್ಯುತ್ತೇವೆ ಎಂಬುದನ್ನು ನೆನಪಿನಲ್ಲಿಡಿ.


ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II


ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಅಬೀಮೆಲೆಕನು ಸತ್ತುಹೋದದ್ದನ್ನು ಕಂಡು ಇಸ್ರಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.


ಶೆಕೆಮಿನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರುವಂತೆಮಾಡಿದರು. ಹೀಗೆ ಯೆರುಬ್ಬಾಳನ ಮಗ ಯೋತಾಮನು ಇವರ ಬಗ್ಗೆ ನುಡಿದ ಶಾಪ ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು