Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:12 - ಕನ್ನಡ ಸತ್ಯವೇದವು C.L. Bible (BSI)

12 ಅತ್ತ ರಾಜನು ಮಂಚದ ಮೇಲೆ ಮಲಗಿಕೊಂಡಿರಲು ಇತ್ತ ಬೀರುತ್ತಿತ್ತು ನನ್ನ ಪರಿಮಳ ತೈಲ ಸುವಾಸನೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರಾಜನು ಅತ್ತ ಓಲಗದಲ್ಲಿದ್ದಾಗ ನನ್ನ ಜಟಾಮಾಂಸಿಯು ಇತ್ತ ಪರಿಮಳವನ್ನು ಬೀರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ, ನನ್ನ ಪರಿಮಳ ತೈಲವು ಸುವಾಸನೆಯನ್ನು ಬೀರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:12
14 ತಿಳಿವುಗಳ ಹೋಲಿಕೆ  

ಆಗ ಮರಿಯಳು ಸುಮಾರು ಅರ್ಧ ಲೀಟರಿನಷ್ಟು, ಅತ್ಯಂತ ಬೆಲೆಬಾಳುವ ಅಚ್ಚ ಜಟಾಮಾಂಸಿ ಸುಗಂಧ ತೈಲವನ್ನು ತಂದು ಯೇಸುವಿನ ಪಾದಗಳಿಗೆ ಹಚ್ಚಿ, ತನ್ನ ತಲೆಗೂದಲಿನಿಂದ ಆ ಪಾದಗಳನ್ನು ಒರಸಿದಳು. ತೈಲದ ಸುವಾಸನೆ ಮನೆಯಲ್ಲೆಲ್ಲಾ ಹರಡಿತು.


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಯೇಸುಸ್ವಾಮಿ ಬೆಥಾನಿಯದಲ್ಲಿ, ಕುಷ್ಠರೋಗಿ ಸಿಮೋನನ ಮನೆಯಲ್ಲಿ ಇದ್ದರು. ಅಲ್ಲಿ ಊಟಕ್ಕೆ ಕುಳಿತಿದ್ದಾಗ, ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಜಟಮಾಂಸಿ ಸುಗಂಧತೈಲವನ್ನು ತೆಗೆದುಕೊಂಡು ಬಂದು, ಭರಣಿಯನ್ನು ಒಡೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


“ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ.


ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ.


ನಿನ್ನ ಶಿರ ಎತ್ತರವಾದ ಕಾರ್ಮೆಲ್ ಶಿಖರದಂತೆ ಗಂಭೀರ ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪು ಹೊಳಪಿನ ಬಣ್ಣ ತನ್ನ ತೆಕ್ಕೆಯಲ್ಲಿ ಅರಸನನೇ ಸೆರೆಹಿಡಿಯುವಂಥ ಆಕರ್ಷಣ.


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ಮಾಡಿಸುವೆ ನಿನಗೆ ಬಂಗಾರದ ಅಂಚು, ಬೆಳ್ಳಿಯ ಕುಚ್ಚು. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು