Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 3:7 - ಕನ್ನಡ ಸತ್ಯವೇದವು C.L. Bible (BSI)

7-8 ಇದೋ, ನೋಡು ಸೊಲೊಮೋನನ ಪಲ್ಲಕ್ಕಿ ಅದರ ಸುತ್ತ ಇಸ್ರಯೇಲಿನ ಶೂರರು ಅರವತ್ತು ಮಂದಿ ಯುದ್ಧಪ್ರವೀಣರಾದ ಅವರಾಗಿಹರು ಶಸ್ತ್ರಧಾರಿ ಕತ್ತಿಯ ಕಟ್ಟಿಹರು ಪ್ರತಿಯೊಬ್ಬರು ಸೊಂಟಕ್ಕೆ ಕತ್ತಲ ದುರಂತಗಳನ್ನು ಎದುರಿಸಲಿಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೋಡು, ಅದು ಸೊಲೊಮೋನನ ಪಾಲಕಿ; ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಮಂದಿ ಅದರ ಸುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೋಡಿ, ಅದು ಸೊಲೊಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೋಡಿರಿ! ಇದು ಸೊಲೊಮೋನನ ರಥ. ಇಸ್ರಾಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಅದರ ಸುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 3:7
12 ತಿಳಿವುಗಳ ಹೋಲಿಕೆ  

ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಅರಸ ಸೊಲೊಮೋನನು ಮಾಡಿಸಿಕೊಂಡನು ಲೆಬನೋನಿನ ಮರದಿಂದ ಆ ಪಲ್ಲಕ್ಕಿಯನು.


ಆಹಾ, ಎನ್ನಿನಿಯಾ, ನೀನೆಷ್ಟು ಸುಂದರ ನೀನೆಷ್ಟು ಮನೋಹರ!


“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದ್ದನು.


ಆದರೆ ಅವನು ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿ, ಪರಿವಾರದವರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ, ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.


ದಾವೀದನು, “ಹೌದು, ತಮ್ಮ ಸೇವಕನ ಸಾಹಸ ತಮಗೇ ಗೊತ್ತಾಗುವುದು,” ಎಂದನು. ಆಕೀಷನು, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುತ್ತೇನೆ,” ಎಂದನು.


ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಘೋರ ಯುದ್ಧ ಇದ್ದುದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡಕೂಡಲೆ, ಅವನನ್ನು ತನ್ನ ಸೈನ್ಯಕ್ಕೆ ಸೇರಿಸಿಕೊಳ್ಳುತ್ತಿದ್ದನು.


ನಿಮ್ಮ ದಾಸದಾಸಿಯರನ್ನು ಹಾಗು ಉತ್ತಮವಾದ ಎತ್ತುಕತ್ತೆಗಳನ್ನು ತನಗಾಗಿ ದುಡಿಸಿಕೊಳ್ಳುವನು.


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು