Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:12 - ಕನ್ನಡ ಸತ್ಯವೇದವು C.L. Bible (BSI)

12 ನನ್ನ ಪ್ರಿಯಳು, ನನ್ನ ಮದಲಗಿತ್ತಿ ಸುಭದ್ರವಾದ ಉದ್ಯಾನವನ ಬೇಲಿಯೊಳಗಿನ ಬುಗ್ಗೆ ಮುಚ್ಚಿ ಮುದ್ರಿಸಿದ ಚಿಲುಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಅಗುಳಿ ಹಾಕಿದ ಉದ್ಯಾನ, ಬೇಲಿಯೊಳಗಿನ ಬುಗ್ಗೆ, ಮುಚ್ಚಿ ಮುದ್ರಿಸಿದ ಬಾವಿ ಆಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಪ್ರಿಯಳೇ, ನನ್ನ ವಧುವೇ, ನೀನು ಭದ್ರ ತೋಟವೂ ಬೇಲಿಯೊಳಗಿನ ಬುಗ್ಗೆಯೂ ಮುದ್ರಿಸಿದ ಬಾವಿಯೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:12
17 ತಿಳಿವುಗಳ ಹೋಲಿಕೆ  

ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಅಂಥವನು ಉಭಯ ಸಂಕಟಕ್ಕೆ ಸಿಕ್ಕಿಕೊಳ್ಳುತ್ತಾನೆ. ಮದುವೆಯಾಗದ ಮಹಿಳೆ ಅಥವಾ ಕನ್ನಿಕೆ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ದೇಹಾತ್ಮಗಳೆರಡನ್ನೂ ಪ್ರಭುವಿಗೆ ಮೀಸಲಾಗಿಡುತ್ತಾಳೆ. ಆದರೆ ವಿವಾಹಿತ ಸ್ತ್ರೀ ಲೋಕವ್ಯವಹಾರಗಳಲ್ಲಿ ಮಗ್ನಳಾಗಿರುತ್ತಾಳೆ. ತನ್ನ ಪತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾಳೆ.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.


ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.


ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.


ಹಿಂಡುಗಳೆಲ್ಲ ಅಲ್ಲಿ ಕೂಡಿದ್ದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ಮತ್ತೆ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.


ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಹೃದಯವನ್ನು ನೀನು ಅಪಹರಿಸಿರುವೆ ಒಂದೇ ಕಿರುನೋಟದಿಂದ, ನನ್ನ ಹೃದಯವನ್ನು ವಶಪಡಿಸಿಕೊಂಡಿರುವೆ ನಿನ್ನ ಕಂಠಹಾರದ ಒಂದೇ ರತ್ನದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು