Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:14 - ಕನ್ನಡ ಸತ್ಯವೇದವು C.L. Bible (BSI)

14 ಬೆಳೆದಿವೆ ಪಟ್ಟೆಲವಂಗ ವಿವಿಧ ಸಾಂಬ್ರಾಣಿ ಗಿಡಗಳು ರಸಗಂಧ, ಅಗರುಗಳು ಸಕಲವಿಧ ಶ್ರೇಷ್ಠ ಸುಗಂಧ ಗಿಡಮೂಲಿಕೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜಟಾಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತವಿಧಧೂಪ, ರಕ್ತಬೋಳ, ಅಗುರು, ಸಕಲ ಮುಖ್ಯ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾರ್ಡ್, ಜಟಾಮಾಂಸಿ, ಕೇಸರಿ, ಬಜೆ, ಲವಂಗಚಕ್ಕೆ, ರಕ್ತಬೋಳ, ಅಗುರು, ಸಾಂಬ್ರಾಣಿ ಗಿಡ ಮತ್ತು ದಾಲ್ಚಿನ್ನಿ ಎಂಬ ಸುಗಂಧದ ಸಸ್ಯಗಳಿಂದಲೂ ಕೂಡಿರುವ ತೋಟಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಜಟಾಮಾಂಸಿ ಅಷ್ಟೇ ಅಲ್ಲದೆ ಕೇಸರಿಯೂ ಬಜೆಯೂ ದಾಲ್ಚಿನ್ನಿಯೂ ಸಕಲ ಸಾಂಬ್ರಾಣಿ ಗಿಡಮೂಲಿಕೆಗಳೂ ರಕ್ತಬೋಳವೂ ಅಗರೂ ಸಕಲವಿಧ ಶ್ರೇಷ್ಠ ಸುಗಂಧ ದ್ರವ್ಯಗಳೂ ಬೆಳೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:14
16 ತಿಳಿವುಗಳ ಹೋಲಿಕೆ  

“ಸುಗಂಧ ದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಆರು ಕಿಲೋಗ್ರಾಂ ಅಚ್ಚರಕ್ತಬೋಳ, ಮೂರು ಕಿಲೋಗ್ರಾಂ ಶ್ರೇಷ್ಠವಾದ ಲವಂಗಚಕ್ಕೆ, ಮೂರು ಕಿಲೋಗ್ರಾಂ ಸುಗಂಧವಾದ ಬಜೆ ಹಾಗು ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ತೆಗೆದುಕೊಳ್ಳಬೇಕು.


ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಪರಿಮಳದ ಬೆಟ್ಟಕೆ ತೆರಳುವೆ ಧೂಪದ ಗುಡ್ಡದೊಳು ಅಡ್ಡಾಡುವೆ.


ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


“ವೆದಾನಿನವರೂ, ಯಾವಾನಿನವರೂ ಉಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸುತ್ತಿದ್ದರು. ಉಕ್ಕು, ಬಜೆ, ಲವಂಗ, ಚಕ್ಕೆಗಳು ನಿನಗೆ ಆಮದಾಗುತ್ತಿದ್ದವು.


ಅತ್ತ ರಾಜನು ಮಂಚದ ಮೇಲೆ ಮಲಗಿಕೊಂಡಿರಲು ಇತ್ತ ಬೀರುತ್ತಿತ್ತು ನನ್ನ ಪರಿಮಳ ತೈಲ ಸುವಾಸನೆಯನು.


ರಸಗಂಧ, ಅಗರು, ಲವಂಗ ಚಕ್ಕೆಗಳಿಂದ ಅದನ್ನು ಘಮಘಮಗೊಳಿಸಿರುವೆ.


ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ಈತನು ಮಾತ್ರವಲ್ಲ, ಹಿಂದೊಮ್ಮೆ ಯೇಸುವನ್ನು ರಾತ್ರಿಯಲ್ಲಿ ನೋಡಲು ಬಂದಿದ್ದ ನಿಕೊದೇಮನು ಕೂಡ ಅಲ್ಲಿಗೆ ಬಂದನು. ಇವನು ರಕ್ತಬೋಳ ಹಾಗೂ ಅಗರು ಕಲಸಿದ ಮೂವತ್ತು ಕಿಲೋಗ್ರಾಮಿನಷ್ಟು ಚೂರ್ಣವನ್ನು ತಂದಿದ್ದನು.


ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಆಕೆ ಅರಸನಿಗೆ 4000 ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನೂ ಅಪರಿಮಿತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದದ್ದು ಯಾವುದೂ ಇರಲಿಲ್ಲ.


ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.


ಅವಿವೆ ಉದ್ದುದ್ದ ಚಾಚಿಕೊಂಡಿರುವ ಕಣಿವೆಗಳಂತೆ ನದಿಯ ಬಳಿಯಿರುವ ತೋಟಗಳಂತೆ ಸರ್ವೇಶ್ವರ ನೆಟ್ಟ ಅಗರುಮರಗಳಂತೆ, ನೀರ ಬದಿಯ ದೇವದಾರು ವೃಕ್ಷಗಳಂತೆ.


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು