Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:3 - ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ತುಟಿ ನಯವಾದ ಕೆಂಪುಪಟ್ಟಿ ಬಿಚ್ಚಿದಾಗ ನೀನೆಷ್ಟು ಸುರೂಪಿಣಿ! ಮಸುಕಿನಲ್ಲಿನ ನಿನ್ನ ಕೆನ್ನೆ, ಹೋಳಾಗಿಸಿದ ದಾಳಿಂಬೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ, ಮುಸುಕಿನೊಳಗಿನ ನಿನ್ನ ಕೆನ್ನೆಯು ದಾಳಿಂಬರದ ತಿರುಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ತುಟಿಗಳು ರೇಷ್ಮೆಯ ಕೆಂಪುದಾರದಂತಿವೆ. ನಿನ್ನ ಬಾಯಿ ಸುಂದರವಾಗಿದೆ. ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನ ತುಟಿ ಕೆಂಪು ದಾರದ ಹಾಗೆ ಇವೆ. ನಿನ್ನ ಮಾತು ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:3
29 ತಿಳಿವುಗಳ ಹೋಲಿಕೆ  

ಮುಸುಕಿನಲಿ ನಿನ್ನ ಕೆನ್ನೆ ಮಾಗಿ ಒಡೆದಿರುವ ದಾಳಿಂಬೆ.


ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.


ನಾವು ಈ ನಾಡನ್ನು ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪುದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನು, ಅಣ್ಣತಮ್ಮಂದಿರನ್ನು, ಎಲ್ಲಾ ಬಂಧುಬಳಗದವರನ್ನು ನಿನ್ನ ಮನೆಯಲ್ಲೇ ಸೇರಿಸಿಕೊಂಡಿರಬೇಕು.


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ !


ಅವನ ಕೆನ್ನೆಗಳು ಕರ್ಣಕುಂಡಲದ ಪಾತಿಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳು ಅವನ ತುಟಿಗಳು ಅಚ್ಚ ಪರಿಮಳ ಸೂಸುವ ಕೆಂದಾವರೆಗಳು.


ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.


ಆಕೆಯ ಬಾಯಿಂದ ಬರುವ ಮಾತು ಜ್ಞಾನಪೂರ್ಣ; ಆಕೆ ಹೇಳುವ ಬುದ್ಧಿಮಾತು ಪ್ರೀತಿಪ್ರೇರಿತ.


ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.


ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


ಯಾಜಕನು ದೇವದಾರು ಮರದ ಕಟ್ಟಿಗೆಯನ್ನು ಹಿಸ್ಸೋಪ್ ಗಿಡದ ಬರಲನ್ನು ಮತ್ತು ರಕ್ತವರ್ಣದ ದಾರವನ್ನು ತೆಗೆದುಕೊಂಡು ಆ ಆಕಳನ್ನು ದಹಿಸುವ ಬೆಂಕಿಯಲ್ಲಿ ಹಾಕಬೇಕು.


ಅವೆಲ್ಲವುಗಳ ಮೇಲೆ ರಕ್ತವರ್ಣದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಸಿಕ್ಕಿಸಬೇಕು.


ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒರತೆ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಿ


ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸಜೀವವಾದ ಎರಡು ಶುದ್ಧಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು