Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:14 - ಕನ್ನಡ ಸತ್ಯವೇದವು C.L. Bible (BSI)

14 ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಕೈಗಳು ಪೀತರತ್ನಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಕೈಗಳು ಗೋಮೇಧಿಕ ರತ್ನದ ಬಂಗಾರದ ಸಲಾಕೆಗಳಂತಿವೆ. ಅವನ ದೇಹ ಇಂದ್ರನೀಲಗಳಿಂದ ಹೊಳೆಯುವ ದಂತದ ಹಾಗೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:14
15 ತಿಳಿವುಗಳ ಹೋಲಿಕೆ  

ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


ಆ ಚಕ್ರಗಳ ವರ್ಣರಚನೆ ಹೇಗಿತ್ತೆಂದರೆ: ಅವುಗಳ ವರ್ಣ ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ಗುಂಡುಬಟ್ಟಲು ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿರಾಶಿಯ ಬಟ್ಟಲು


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಢೂರ್ಯಗಳೂ ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಹಾಗು ವೈಢೂರ್ಯಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ಎರಡನೆಯ ಸಾಲಿನಲ್ಲಿ ಕೆಂಪರಲು ಹಾಗು ನೀಲಿ ಪಚ್ಚೆಗಳನ್ನು;


ಓಫೀರ್ ದೇಶದ ಅಪರಂಜಿಯಿಂದಲೂ ಅಮೂಲ್ಯ ಗೋಮೇಧಿಕ-ಇಂದ್ರನೀಲದಿಂದಲೂ ಸುಜ್ಞಾನದ ಮೌಲ್ಯವನ್ನು ಗೊತ್ತುಮಾಡಲಾಗದು.


ಅವನ ಶರೀರ ಸುವರ್ಣರತ್ನದ ಹಾಗೆ ಕಂಗೊಳಿಸಿತು. ಅವನ ಮುಖ ಮಿಂಚಿನಂತೆ ಹೊಳೆಯಿತು. ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ಫಳಫಳಿಸಿದವು. ಅವನ ಕೈಕಾಲುಗಳು ಬೆಳಗಿದ ಕಂಚಿನ ಹಾಗೆ ಥಳಥಳಿಸಿದವು. ಅವನ ಮಾತಿನ ಶಬ್ದ ಜನಸಂದಣಿಯ ಕೋಲಾಹಲದಂತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು