Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:7 - ಕನ್ನಡ ಸತ್ಯವೇದವು C.L. Bible (BSI)

7 ಸುತ್ತುತ್ತಿದ್ದರು ಬೀದಿಗಳಲಿ ಪಹರೆಯವರು ನನ್ನನ್ನು ಕಂಡುಹಿಡಿದರು, ಹೊಡೆದು ಗಾಯಗೊಳಿಸಿದರು. ಕಿತ್ತುಕೊಂಡರು ಮೇಲುಹೊದಿಕೆಯನು ಆ ಪೌಳಿಗೋಡೆಯ ಕಾವಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡು ಹಿಡಿದು ಹೊಡೆದು ಗಾಯಪಡಿಸಿದರು; ಪವುಳಿಯ ಕಾವಲುಗಾರರು ಮೇಲುಹೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು. ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡುಹಿಡಿದರು. ನನ್ನನ್ನು ಹೊಡೆದು, ಗಾಯ ಮಾಡಿದರು. ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:7
25 ತಿಳಿವುಗಳ ಹೋಲಿಕೆ  

ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದೆ “ನನ್ನ ಪ್ರಾಣಕಾಂತನನ್ನು ಕಂಡಿರಾ?’ ಎಂದು ವಿಚಾರಿಸಿದೆ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.


ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


“ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ.


ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


ಸೊಲೊಮೋನನಿಗಿತ್ತು ಬಾಲ್ಹಾಮೋನಿನಲ್ಲಿ ಒಂದು ದ್ರಾಕ್ಷಾತೋಟ ಅದನು ಗುತ್ತಿಗೆಗೆ ಕೊಡಲು ಮೇಲ್ವಿಚಾರಕರಿಗೆ ವಹಿಸಿದ. ಪ್ರತಿಯೊಬ್ಬ ಗುತ್ತಿಗೆಗಾರ ತೆರಬೇಕಾಗಿತ್ತು ಸಾವಿರ ಬೆಳ್ಳಿನಾಣ್ಯ.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.


ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ : “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು :


ನವಿರು ಜಾಲರಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು