Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:11 - ಕನ್ನಡ ಸತ್ಯವೇದವು C.L. Bible (BSI)

11 ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದ್ರಾಕ್ಷೆಯು ಚಿಗುರಿದೆಯೋ, ದಾಳಿಂಬರಗಳು ಹೂಬಿಟ್ಟಿವೆಯೋ ಎಂದು ತಗ್ಗಿನ ಸಸ್ಯಗಳನ್ನು ನೋಡಲು ಬಾದಾವಿುಯ ತೋಟಕ್ಕೆ ನಾನು ಹೋಗಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:11
14 ತಿಳಿವುಗಳ ಹೋಲಿಕೆ  

ಬೆಳಗ್ಗೆ ಹೊರಟು ತೋಟಗಳಿಗೆ ಹೋಗೋಣ ಬಾ ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ ಅಲ್ಲೆ ನಿನಗೆ ನನ್ನ ಪ್ರೀತಿಯನರ್ಪಿಸುವೆ ಬಾ.


ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.


ದೂರದಲ್ಲಿ ಎಲೆ ತುಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೇನಾದರೂ ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಿಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.


ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ತೋಟಗಾರನನ್ನು ಕರೆದು, ‘ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದುಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?’ ಎಂದು ಹೇಳಿದ.


ಅದಕ್ಕೆ ಮೂರು ಕವಲುಗಳಿದ್ದವು. ಅದು ಚಿಗುರುತ್ತಲೇ ಹೂಗಳನ್ನು ಬಿಟ್ಟಿತು. ಆ ಹೂಗಳು ಗೊಂಚಲುಗಳಾಗಿ ಹಣ್ಣಾದವು.


ಇದ್ದಕ್ಕಿದ್ದ ಹಾಗೆಯೇ ನಾಯಕನಾಗಿ ನನ್ನ ನಾಡಿಗೆ ನಾ ಕುಳಿತಿದ್ದೆ ರಥದ ಮೇಲೆ.


ಕಾಮಜನಕ ವೃಕ್ಷಗಳು ಹೀರುತ್ತಿವೆ ಪರಿಮಳ ಒಳ್ಳೊಳ್ಳೆಯ ಬಗೆಬಗೆಯ, ಹಳೆಹೊಸ ಹಣ್ಣುಗಳ ನಾನಿಟ್ಟುಕೊಂಡಿರುವೆ, ಪ್ರಿಯನೇ, ಬಾಗಿಲ ಹತ್ತಿರ ನಿನಗೋಸ್ಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು