Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:9 - ಕನ್ನಡ ಸತ್ಯವೇದವು C.L. Bible (BSI)

9 ಅವಳೊಂದು ಕೋಟೆಯಾದರೆ ಕಟ್ಟುವೆವು ಬುರುಜನ್ನು ಬೆಳ್ಳಿಯಿಂದ. ಅವಳೊಂದು ಬಾಗಿಲಾದರೆ ಭದ್ರಪಡಿಸುವೆವು ದೇವದಾರು ಮರಗಳಿಂದ. ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಿಗೆಗಳಿಂದ ಭದ್ರಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಕೆ ಕೋಟೆಯಾಗಿದ್ದರೆ ಅದರ ಮೇಲೆ ಬೆಳ್ಳಿಯ ಗೋಪುರಗಳನ್ನು ಕಟ್ಟುತ್ತಿದ್ದೆವು. ಆಕೆ ಬಾಗಿಲಾಗಿದ್ದರೆ, ಶ್ರೇಷ್ಠವಾದ ದೇವದಾರು ಮರದ ಹಲಗೆಗಳಿಂದ ಅದನ್ನು ಹೊದಿಸುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವಳು ಗೋಡೆಯಾದರೆ, ನಾವು ಅವಳ ಮೇಲೆ ಬೆಳ್ಳಿಯ ಗೋಪುರವನ್ನು ಕಟ್ಟುವೆವು. ಅವಳು ಬಾಗಿಲಾದರೆ, ದೇವದಾರು ಹಲಿಗೆಗಳಿಂದ ಅವಳನ್ನು ಭದ್ರಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:9
14 ತಿಳಿವುಗಳ ಹೋಲಿಕೆ  

‘ಅಳಿದುಹೋದ ದಾವೀದನ ಮನೆತನವನು ಪುನರ್‍ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಮರಳಿ ಕಟ್ಟುವರಿವರು ಪಾಳುಬಿದ್ದ ಪುರಾತನ ಮನೆಗಳನು ಮತ್ತೆ ಎಬ್ಬಿಸುವರು ಬಿದ್ದ ಹಳೆಯ ಕಟ್ಟಡಗಳನು ನೂತನಗೊಳಿಸುವರು ತಲಾಂತರದ ಹಾಳುಬೀಳು ಪಟ್ಟಣಗಳನು.


ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ.


ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ನನ್ನ ಪ್ರಿಯನು ಇಹನು ಜಿಂಕೆಯಂತೆ, ಎಳೆಯ ಹುಲ್ಲೆಯಂತೆ ಇಗೋ, ನಿಂತಿಹನು ಗೋಡೆಯ ಹಿಂಭಾಗದಲೆ, ದೃಷ್ಟಿಸಿ ನೋಡುತಿಹನು ಕಿಟಕಿಗಳಲಿ ಇಣುಕು ಹಾಕುತಿಹನು ಜಾಲಾಂತರಗಳಲಿ.


ದೇವಾಲಯದ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿಮರದ ಹಲಗೆಗಳನ್ನು ಹಾಕಿಸಿದನು.


“ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು.


ಮಾಡಿಸುವೆ ನಿನಗೆ ಬಂಗಾರದ ಅಂಚು, ಬೆಳ್ಳಿಯ ಕುಚ್ಚು. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು