Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:6 - ಕನ್ನಡ ಸತ್ಯವೇದವು C.L. Bible (BSI)

6 ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ತೆನಿ ಅಮ್ಕಾ ಅಪ್ನಾಚ್ಯಾ ದೆವಾ ಅನಿ ಬಾಬಾಚಿ ಸೆವಾ ಕರ್‍ತಲ್ಯಾ ಯಾಜಕಾಂಚೊ ರಾಜ್ ಕರ್‍ಲ್ಯಾನಾಯ್, ಮಹಿಮಾ ಅನಿ ಸಗ್ಳ್ಯಾನ್ ಮೊಟೊ ಅದಿಕಾರ್ ಸದಾ ಸರ್ವತಾಕ್ ಜೆಜು ಕ್ರಿಸ್ತಾಚೊಚ್ ತಸೆಚ್ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:6
23 ತಿಳಿವುಗಳ ಹೋಲಿಕೆ  

ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ಹೀಗೆ ಒಮ್ಮನಸ್ಸಿನಿಂದಲೂ ಒಕ್ಕೊರಲಿನಿಂದಲೂ ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರನ್ನು ಕೊಂಡಾಡುವಂತಾಗಲಿ.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಅವರ ಆಳ್ವಿಕೆ ಯುಗಯುಗಾಂತರಕ್ಕೂ ಇರಲಿ. ಆಮೆನ್.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು