Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:4 - ಕನ್ನಡ ಸತ್ಯವೇದವು C.L. Bible (BSI)

4 ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ಬೊಲಲ್ಲ್ಯಾ ತನ್ನಾ ತಾಬೊಡ್ತೊಬ್ ಮಿಯಾ ಲಿವ್ನಾರ್ ಹೊತ್ತೊ. ಖರೆ ಸರ್‍ಗಾ ವೈನಾ ಬೊಲ್ತಲೊ ಎಕ್ ಧನ್ ಮಾಕಾ ಆಯ್ಕೊ ಯೆಲೊ,“ಸಾತ್ ಗುಡ್ಗುಡ್ಯಾನಿ ಸಾಂಗಲ್ಲೆ ಘುಟಾನ್ ಥವ್; ತೆ ಲಿವ್ನ್ ಘೆವ್‍ನಕೊ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:4
13 ತಿಳಿವುಗಳ ಹೋಲಿಕೆ  

“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”


ಕನಸಿನಲ್ಲಿ ತಿಳಿಸಲಾದ ಉದಯಾಸ್ತಮಾನಗಳ ವಿಷಯ ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹುದೂರದ ಕಾಲದ್ದು,” ಎಂದು ಹೇಳಿದನು.


ಅವನು, “ದಾನಿಯೇಲನೇ ಹೋಗು; ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಲ್ಪಟ್ಟು ಮುದ್ರಿತವಾಗಿವೆ.


ಇದಲ್ಲದೆ ಆತನು ನನಗೆ, “ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳಿಗೆ ಮುದ್ರೆಹಾಕಿ ಮುಚ್ಚಿಡಬೇಡ; ಇವು ನೆರವೇರುವ ಕಾಲವು ಸಮೀಪಿಸಿತು.


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಈ ಕಾರಣ, ನಿನ್ನ ಕುರಿತ ದಿವ್ಯದರ್ಶನ ನಿಗೂಢ ಗ್ರಂಥವಾಕ್ಯವಾಗಿಬಿಟ್ಟಿದೆ. ಅದನ್ನು ಅಕ್ಷರಬಲ್ಲವನಿಗೆ, “ದಯಮಾಡಿ ಇದನ್ನು ಓದು,” ಎಂದು ಕೊಟ್ಟರೆ, ಅವನು : “ಇದು ನಿಗೂಢವಾಗಿದೆ, ಆಗುವುದಿಲ್ಲ,” ಎನ್ನುತ್ತಾನೆ.


ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು.


ಅನಂತರ ಸರ್ವೇಶ್ವರಸ್ವಾಮಿ ನನಗೆ ಹೀಗೆಂದರು: “ಬರೆಯುವ ದೊಡ್ಡ ಹಲಗೆ ಒಂದನ್ನು ತೆಗೆದುಕೊಂಡು ಸಾಧಾರಣ ಲಿಪಿಯಲ್ಲಿ, ಈ ಸೂಚ್ಯವಾದ ಪದಗಳನ್ನು ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಅಂದರೆ ಸೂರೆಗೆ ಆತುರ; ಕೊಳ್ಳೆಗೆ ಅವಸರ).


ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.


ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗು. ಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು