Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:6 - ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಸರ್ಗ್, ಜಿಮಿನ್, ಅನಿ ಸಮುಂದರ್ ಅನಿ ತೆಂಚ್ಯಾ ವೈನಿ ಹೊತ್ತೆ ಸಗ್ಳೆ ರಚಲ್ಲ್ಯಾ ಸದಾ ಸರ್ವತಾಕ್ ಝಿತ್ತೊ ರ್‍ಹಾತಲ್ಯಾ ದೆವಾಚ್ಯಾ ನಾವಾನ್ ಆನ್ ಘಾಟ್ಲ್ಯಾನ್. ತ್ಯಾ ದೆವಾಚ್ಯಾ ದುತಾನ್, ಅನಿ ಜಾಸ್ತಿ ಎಳ್ ಹೊಯ್ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:6
14 ತಿಳಿವುಗಳ ಹೋಲಿಕೆ  

ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ವಾಯುಮಂಡಲದ ಮೇಲೆ ಸುರಿದನು. ಆಗ ದೇವಾಲಯದ ಸಿಂಹಾಸನದ ಕಡೆಯಿಂದ ಒಂದು ದೊಡ್ಡ ಧ್ವನಿ ಉಂಟಾಗಿ, “ಮುಗಿಸಿದ್ದಾಯಿತು,” ಎಂದು ಹೇಳಿತು.


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು.


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು