Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:9 - ಕನ್ನಡ ಸತ್ಯವೇದವು C.L. Bible (BSI)

9 ನಾನು ಆ ದೇವದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು,” ಎಂದು ಕೇಳಿದೆ. ಅವನು “ತೆಗೆದುಕೋ, ಇದನ್ನು ತಿನ್ನು. ಇದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿಯೂ ನಿನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿಯೂ ಇರುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಆ ದೂತನ ಬಳಿಗೆ ಹೋಗಿ - ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ - ನೀನು ಇದನ್ನು ತೆಗೆದುಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನಾನು ಆ ದೇವದೂತನ ಬಳಿಗೆ ಹೋಗಿ, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಆ ದೇವದೂತನು ನನಗೆ, “ಸುರುಳಿಯನ್ನು ತೆಗೆದುಕೊಂಡು ಅದನ್ನು ತಿಂದುಬಿಡು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನಾನು ದೇವದೂತನ ಬಳಿ ಹೋಗಿ, ಅವನನ್ನು, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಅವನು ನನಗೆ, “ಇದನ್ನು ತೆಗೆದುಕೊಂಡು ತಿನ್ನು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು. ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ದೆವ್‍ದುತಾಕ್ಡೆ ಜಾವ್ನ್ ತಿ ಸುಳ್ಳಿ ಮಾಕಾ ದಿ ಮನುನ್ ಇಚಾರ್ಲೊ. ತ್ಯಾ ದೆವಾಚ್ಯಾ ದುತಾನ್ ಮಾಕಾ, “ಹೆ ಘೆ ಅನಿ ಖಾ; ಹೆ ತುಜ್ಯಾ ಪೊಟಾತ್ ಜಾವ್ನ್ ಅಂಬೊಟ್ ಹೊತಾ, ಖರೆ ತುಜ್ಯಾ ತೊಂಡಾತ್ ತೆ ಮ್ಹವಾ ಸರ್ಕೆ ಗೊಡ್ ರ್‍ಹಾತಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:9
7 ತಿಳಿವುಗಳ ಹೋಲಿಕೆ  

ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


“ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು.


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ.


ಅಂತೆಯೇ, ನಾನು ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆ. ಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತು. ಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು