Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:4 - ಕನ್ನಡ ಸತ್ಯವೇದವು C.L. Bible (BSI)

4 ಲೋಕಾಧಿಪತಿಯಾದ ದೇವರ ಸಾನ್ನಿಧ್ಯದಲ್ಲಿರುವ ಎರಡು ಓಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಭೂಲೋಕದ ಪ್ರಭುವಿನ ಸನ್ನಿಧಿಯಲ್ಲಿ ನಿಂತಿರುವ ಎರಡು ಆಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳೇ ಈ ಇಬ್ಬರು ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇವರು, “ಎಣ್ಣೆಯ ಮರಗಳೂ ಭೂಲೋಕದ ಒಡೆಯ ಆಗಿರುವವರ ಮುಂದೆ ನಿಂತಿರುವ ಎರಡು ದೀಪಸ್ತಂಭಗಳೂ ಆಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆ ದೊಗೆ ಸಾಕ್ಷಿ ದೊನ್ ಒಲಿವ್ ಝಾಡಾ ಅನಿ ಜಿಮ್ನಿಚ್ಯಾ ಧನಿಯಾಚ್ಯಾ ಇದ್ರಾಕ್ ಇಬೆ ಅಸಲ್ಲೆ ದೊನ್ ದಿವ್ಯಾಚೆ ಖಾಂಬೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:4
14 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು.


ನಾನಾದರೋ ದೇಗುಲದಲಿ ಬೆಳೆದಿಹ ಎಣ್ಣೆಮರದಂತಿರುವೆನು I ದೇವರ ಸ್ಥಿರಪ್ರೀತಿಯನು ಯುಗಾಂತರಕು ನಂಬಿಕೊಂಡಿರುವೆನು II


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ಈಗ ಉತ್ತಮ ತಳಿಯ ಓಲಿವ್ ಮರದಿಂದ ಕೆಲವು ರೆಂಬೆಗಳನ್ನು ಕಡಿದುಹಾಕಿ ಆ ತಾವಿನಲ್ಲಿ ಕಾಡು ಓಲಿವ್ ಮರದ ರೆಂಬೆಯನ್ನು ಕಸಿಮಾಡಲಾಗಿದೆ. ಅನ್ಯಜನಾದ ನೀನು ಆ ಕಾಡುಮರದ ರೆಂಬೆಯಂತಿರುವೆ; ಕಸಿಮಾಡಿರುವುದರಿಂದ ರಸವತ್ತಾದ ಆ ಬೇರಿನಿಂದ ಈಗ ಪೋಷಣೆ ಪಡೆಯುತ್ತಿರುವೆ.


“ಯಾರೂ ದೀಪವನ್ನು ಹಚ್ಚಿ ನೆಲಮಾಳಿಗೆಯಲ್ಲಾಗಲಿ, ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ.


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು