Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:3 - ಕನ್ನಡ ಸತ್ಯವೇದವು C.L. Bible (BSI)

3 ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದೇನಂದರೆ ಕೆಂಪಾದ ಮಹಾ ಘಟಸರ್ಪವಿತ್ತು; ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಮಕುಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಎಕ್ ವಳಕ್ ಮಳ್ಬಾ ವರ್ತಿ ದಿಸ್ಲಿ ಥೈ ಎಕ್ ತಾಂಬ್ಡೊ ಭಯಾನಕ್ ಸಾಂಪ್ ಹೊತ್ತೊ, ತೆಕಾ ಸಾತ್ ಟಕ್ಲಿ ಹೊತ್ತಿ ಅನಿ ಧಾ ಸಿಂಗಾ ಹೊತ್ತಿ. ತೆಚ್ಯಾ ಹರಿಎಕ್ ಟಕ್ಲ್ಯಾ ವರ್ತಿ ಎಕೆಕ್ ಮುಕುಟ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:3
27 ತಿಳಿವುಗಳ ಹೋಲಿಕೆ  

“ನೀನು ಕಂಡ ಹತ್ತು ಕೊಂಬುಗಳು ಹತ್ತು ರಾಜರುಗಳನ್ನು ಸೂಚಿಸುತ್ತವೆ. ಅವರು ಇನ್ನೂ ರಾಜ್ಯಭಾರವನ್ನು ವಹಿಸಿಕೊಂಡಿಲ್ಲ. ಆ ಮೃಗದ ಜೊತೆಯಲ್ಲಿ ರಾಜ್ಯವಾಳಲು ಒಂದು ಗಂಟೆಯವರೆಗೆ ಅವರಿಗೆ ಅಧಿಕಾರವನ್ನು ಕೊಡಲಾಗುವುದು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಆ ದೇವದೂತನು ನನಗೆ ಹೀಗೆ ಹೇಳಿದನು : “ನೀನು ದಿಗ್ಭ್ರಮೆಗೊಂಡಿರುವುದೇಕೆ? ಆ ಸ್ತ್ರೀಯ ಹಾಗೂ ಅವಳ ವಾಹನವಾಗಿರುವ ಏಳು ತಲೆ, ಹತ್ತು ಕೊಂಬುಗಳುಳ್ಳ ಮೃಗದ ನಿಗೂಢತೆಯನ್ನು ನಾನು ನಿನಗೆ ವಿವರಿಸುತ್ತೇನೆ.


ಆ ಹತ್ತು ಕೊಂಬುಗಳು ಅದೇ ರಾಜ್ಯವನ್ನು ಆಳುವ ಹತ್ತುಮಂದಿ ಅರಸರು. ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮುಂಚಿನ ಅರಸರಿಗಿಂತ ವಿಲಕ್ಷಣವಾಗಿರುವನು, ಆ ಮೂವರು ಅರಸರನ್ನು ಸದೆಬಡಿದುಬಿಡುವನು.


ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,


ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.


ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು.


ಇವುಗಳಾದ ಮೇಲೆ ಕಪ್ಪೆಗಳಂತಿದ್ದ ಮೂರು ದುಷ್ಟಾತ್ಮಗಳನ್ನು ನಾನು ಕಂಡೆ. ಅವು ಘಟಸರ್ಪದ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಕಪಟ ಪ್ರವಾದಿಯ ಬಾಯೊಳಗಿಂದಲೂ ಹೊರಟುಬಂದವು.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.


ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.


ಕಾಲ್ಬೆರಳುಗಳ ಒಂದಂಶ ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶ ಗಟ್ಟಿ ಇನ್ನೊಂದು ಅಂಶ ಬೆಂಡು.


ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.


ಘಟಸರ್ಪವು ತನ್ನನ್ನು ಭೂಮಿಗೆ ತಳ್ಳಲಾಗಿರುವುದನ್ನು ಅರಿತು, ಗಂಡುಮಗುವಿಗೆ ಜನ್ಮವಿತ್ತ ಆ ಮಹಿಳೆಯನ್ನು ಅಟ್ಟಿಸಿಕೊಂಡು ಓಡಿತು.


ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.


ನಾನು ಕಂಡ ಆ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತಿದ್ದವು. ಬಾಯಿಯು, ಸಿಂಹದ ಬಾಯಂತೆ ಇತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಅಪಾರ ಅಧಿಕಾರವನ್ನೂ ಕೊಟ್ಟಿತು.


ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.


ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.


ಪಾದಗಳಲ್ಲಿ ಹಾಗು ಪಾದಬೆರಳುಗಳಲ್ಲಿ ಒಂದು ಅಂಶ ಕಬ್ಬಿಣ ಮತ್ತೊಂದು ಅಂಶ ಮಣ್ಣು ಆಗಿದ್ದನ್ನು ನೀವು ನೋಡಿದಿರಿ. ಅಂತೆಯೇ ಆ ರಾಜ್ಯವು ಭಿನ್ನಭಿನ್ನವಾಗಿರುವುದು. ಜೇಡಿಮಣ್ಣಿನೊಂದಿಗೆ ಕಬ್ಬಿಣ ಮಿಶ್ರವಾಗಿದ್ದನ್ನು ನೀವು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲ ಸೇರಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು