Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:8 - ಕನ್ನಡ ಸತ್ಯವೇದವು C.L. Bible (BSI)

8 ಆದರೆ ಜಯಗಳಿಸುವಷ್ಟು ಸಾಮರ್ಥ್ಯ ಘಟಸರ್ಪಕ್ಕಿರದೆ ಅದು ಸೋಲನ್ನಪ್ಪಿತು. ಹೀಗೆ ಸ್ವರ್ಗದಲ್ಲಿ ಅದಕ್ಕೂ ಅದರ ದೂತರಿಗೂ ಸ್ಥಳವಿಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು ಪರಲೋಕದೊಳಗೆ ಅವರಿಗೆ ಸ್ಥಾನವು ತಪ್ಪಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಆ ಘಟಸರ್ಪವೂ ಅದರ ದೂತರೂ ಸೋತುಹೋಗಿ ಪರಲೋಕದಲ್ಲಿ ತಮ್ಮ ಸ್ಥಾನಗಳನ್ನು ಕಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರಿಗೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ, ಪರಲೋಕದೊಳಗೆ ಅವರಿಗಿರುವ ಸ್ಥಾನವನ್ನು ಕಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ತೊ ಭಯಾನಕ್ ಸಾಪ್ ಹಾರ್‍ತಾ, ಅನಿ ಅನಿಫಿಡೆ ತೆಕಾ ಅನಿ ತ್ಯೆಚ್ಯಾ ದುತಾಕ್ನಿ ಸರ್‍ಗಾ ವರ್ತಿ ಜಾಗೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:8
18 ತಿಳಿವುಗಳ ಹೋಲಿಕೆ  

ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ಯೌವನಾರಭ್ಯ ನನ್ನನು ಎನಿತೋ ಬಾಧಿಸಿಹರು I ನನ್ನ ಮೇಲಾದರೋ ಜಯಗಳಿಸಲಿಲ್ಲ ಅವರು II


ತಾನು ಜಯಗಳಿಸಿದೆನೆಂದು ಶತ್ರು ಹೇಳಿಕೊಳ್ಳದಿರಲಿ I ನಾನು ಜಾರಿ ಬಿದ್ದೆನೆಂದು ವೈರಿ ಹಿರಿಹಿಗ್ಗದಿರಲಿ II


ಕಂಡವನ ಕಣ್ಣಿಗೆ ಅವನು ಮತ್ತೆ ಕಾಣಿಸನು ಅವನ ನಿವಾಸ ಮತ್ತೆ ಅವನನು ನೋಡದು.


ಅಲ್ಲಿಂದ ಅವನನ್ನು ಕಿತ್ತುಹಾಕಿದ್ದೇ ಆದರೆ ಅವನನ್ನು ಕಂಡದ್ದೇ ಇಲ್ಲ ಎಂದು ಬೊಂಕುವುದು ಆ ಸ್ಥಳ.


ತನ್ನ ಮನೆಗವನು ಹಿಂತಿರುಗುವುದಿಲ್ಲ ಅವನ ನಿವಾಸಕ್ಕೆ ಅವನ ಗುರುತೇ ಇಲ್ಲ.


ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು