Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:11 - ಕನ್ನಡ ಸತ್ಯವೇದವು C.L. Bible (BSI)

11 ಬಳಿಕ ನಾನು ಮತ್ತೊಂದು ಮೃಗವನ್ನು ಕಂಡೆ. ಅದು ಭೂಮಿಯಿಂದ ಮೇಲೇರಿ ಬಂದಿತು. ಅದಕ್ಕೆ ಟಗರಿಗಿರುವಂಥ ಎರಡು ಕೊಂಬುಗಳು ಇದ್ದವು. ಆದರೆ ಅದು ಘಟಸರ್ಪದಂತೆಯೇ ಮಾತನಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತೊಂದು ಮೃಗವು ಭೂವಿುಯೊಳಗಿಂದ ಬರುವದನ್ನು ಕಂಡೆನು. ಇದಕ್ಕೆ ಟಗರಿಗಿರುವಂತೆ ಎರಡು ಕೊಂಬುಗಳಿದ್ದವು; ಘಟಸರ್ಪದಂತೆ ಮಾತಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಂತರ ಭೂಮಿಯಿಂದ ಹೊರಗೆ ಬರುತ್ತಿರುವ ಮತ್ತೊಂದು ಮೃಗವನ್ನು ನಾನು ನೋಡಿದೆನು. ಅದಕ್ಕೆ ಟಗರಿನಂತೆ ಎರಡು ಕೊಂಬುಗಳಿದ್ದವು. ಆದರೆ ಅದು ಘಟಸರ್ಪದಂತೆ ಮಾತಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಜಿಮ್ನಿತ್ನಾ ವೈರ್ ಯೆಲ್ಲೆ ಅನಿ ಎಕ್ ಭಯಾನಕ್ ಜನಾವರ್ ಮಿಯಾ ಬಗಟ್ಲೊ, ತೆಕಾ ಬೊಕ್ಡಾಚ್ಯಾ ಸರ್ಕಿ ದೊನ್ ಶಿಂಗಾ ಹೊತ್ತಿ, ಅನಿ ತೆ ಎಕ್ ಭಯಾನಕ್ ಸಾಪಾಚ್ಯಾ ಸರ್ಕೆ ಬೊಲುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:11
17 ತಿಳಿವುಗಳ ಹೋಲಿಕೆ  

ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಇವುಗಳಾದ ಮೇಲೆ ಕಪ್ಪೆಗಳಂತಿದ್ದ ಮೂರು ದುಷ್ಟಾತ್ಮಗಳನ್ನು ನಾನು ಕಂಡೆ. ಅವು ಘಟಸರ್ಪದ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಕಪಟ ಪ್ರವಾದಿಯ ಬಾಯೊಳಗಿಂದಲೂ ಹೊರಟುಬಂದವು.


ಆ ಗುರುತಿನ ಹಚ್ಚೆಯನ್ನು ಯಾರು ಚುಚ್ಚಿಸಿಕೊಳ್ಳಲಿಲ್ಲವೋ ಅವರು ಕೊಳ್ಳುವುದಕ್ಕಾಗಲಿ, ಮಾರುವುದಕ್ಕಾಗಲಿ ಸಾಧ್ಯ ಇರಲಿಲ್ಲ. ಆ ಗುರುತಿನ ಮುದ್ರೆ ಏನೆಂದರೆ ಮೃಗದ ಹೆಸರು ಇಲ್ಲವೆ, ಆ ಹೆಸರನ್ನು ಸೂಚಿಸುವ ಸಂಖ್ಯೆ.


ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಕಣ್ಣೆತ್ತಿ ನೋಡಿದಾಗ ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿದ್ದು ಕಾಣಿಸಿತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.


ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.


ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು